ಪಟ್ಟಣದ ಲೋಕೋಪಯೋಗಿ ವಸತಿಗೃಹದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರಕವಿ.

ಹನೂರು : ಪಟ್ಟಣದ ಲೋಕೋಪಯೋಗಿ ವಸತಿಗೃಹದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರಕವಿ ಕುವೆಂಪು ರವರ ಜಯಂತಿಗೆ ಹಿರಿಯ ಅಧಿಕಾರಿಗಳು ಗೈರಾಗುವ ಮೂಲಕ ಕಿರಿಯ ಅಧಿಕಾರಿಗಳು ಕಾಟಾಚಾರಕ್ಕೆ ಆಚರಿಸಿದ್ದಾರೆ.ಗುರುವಾರ ರಾಷ್ಟ್ರಕವಿ ಕುವೆಂಪುರವರ 119ನೇ ಜನ್ಮ ಜಯಂತಿ ಆಚರಣೆ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ತಹಸಿಲ್ದಾರ್ ಆನಂದಯ್ಯ ರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಬೇಕಿತ್ತು. ಆದರೆ ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆಯಲ್ಲಿ ಭಾಗವಹಿಸಿದ್ದ ಕಾರಣ ಗ್ರೇಡ್ 2 ತಹಸಿಲ್ದಾರ್ ಧನಂಜಯ್ ರವರಿಗೆ ಉಸ್ತುವಾರಿ ನೀಡಲಾಗಿತ್ತು. ಈ ಹಿನ್ನೆಲೆ ಗುರುವಾರ 10:30 ಗಂಟೆಗೆ ಕುವೆಂಪು ಜಯಂತಿ ನಿಗದಿ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್, ಸದಸ್ಯ ಹರೀಶ್, ಸುದೇಶ್ ಮುಖಂಡರುಗಳಾದ ನಟರಾಜು, ಸಿದ್ದೇಗೌಡ ಆಗಮಿಸಿ ಅಧಿಕಾರಿಗಳ ಬರುವಿಕೆಗೆ ಕಾದು ಕುಳಿತಿದ್ದರು. 11.15 ಗಂಟೆ ಆದರೂ ಸಹ ಗ್ರೇಡ್ 2 ತಹಸಿಲ್ದಾರ್ ಹಾಜರಾಗಿರಲಿಲ್ಲ.ಇದರಿಂದ ಅಸಮಾಧಾನಗೊಂಡ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್ ರವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ನಂತರ ಶಿರಸ್ತಿದಾರ್ ನಾಗೇಂದ್ರ ತರಾತುರಿಯಲ್ಲಿ ಪೂಜೆ ಮಾಡಿಸಿ ಜಯಂತಿ ಆಚರಿಸಿದರು. ರಾಷ್ಟ್ರಕವಿ ಕುವೆಂಪುರವರಿಗೆ ಜನ್ಮದಿನದಂದು ಗೌರವ ನೀಡುವ ಬದಲು ಅ ಗೌರವ ತೋರಿಸಿರುವುದಕ್ಕೆ ಅಧಿಕಾರಿಗಳ ವಿರುದ್ಧ ಪ್ರಜ್ಞಾವಂತ ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

 

Please follow and like us:

Leave a Reply

Your email address will not be published. Required fields are marked *

Next Post

ಕಾಲುವೆಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವನ್ನಪ್ಪಿದ ಪ್ರಕರಣ.

Thu Dec 29 , 2022
ಕಾಲುವೆಯಲ್ಲಿ ದೊರೆತ ಮತ್ತೋರ್ವ ವಿದ್ಯಾರ್ಥಿ ಮೃತದೇಹ. ಸಂತೋಷ್(14) ಮೃತಪಟ್ಟಿರುವ ವಿದ್ಯಾರ್ಥಿ. ನೆನ್ನೆ ಜಿನೇದ್ ಬಾಷಾ(15) ವಿದ್ಯಾರ್ಥಿಯ ಮೃತದೇಹ ದೊರೆತಿತ್ತು. ಇನ್ನುಳಿದ ಮೂವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಓರ್ವನನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿತ್ತು. ಇಂದು ಬೆಳಿಗ್ಗೆ ಅಗ್ನಿಶಾಮಕ ದಳದಿಂದ ಮತ್ತೋರ್ವ ವಿದ್ಯಾರ್ಥಿ ಮೃತದೇಹ ಹೊರತೆಗೆಯಲಾಗಿದೆ. ಏಳು ಮಂದಿ ವಿದ್ಯಾರ್ಥಿಗಳು ನೆನ್ನೆ ಮಧ್ಯಾಹ್ನ ಈಜಲು ತೆರಳಿದ್ದರು. ದಕ್ಷಿಣ ಪಿನಾಕಿನಿ ನದಿ ಕಾಲುವೆಗೆ ತೆರಳಿದ್ದ ವಿದ್ಯಾರ್ಥಿಗಳು. ದೇವನಹಳ್ಳಿ ತಾಲೂಕಿನ ದೇವನಾಯಕನಹಳ್ಳಿ ಬಳಿ […]

Advertisement

Wordpress Social Share Plugin powered by Ultimatelysocial