ಬೆಂಗಳೂರು : ಆಸ್ತಿ ಖರೀದಿ, ಮಾರಾಟಗಾರರಿಗೆ ಕಂದಾಯ ಇಲಾಖೆ ಸಿಹಿಸುದ್ದಿ ನೀಡಿದ್ದು, ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಹೊಸ ಕಾವೇರಿ 2.0 ತಂತ್ರಾಂಶ ಬಳಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.
ಆಸ್ತಿ ಖರೀದಿ, ಮಾರಾಟದ ವೇಳೆ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ತ್ವರಿತಗತಿಯಲ್ಲಿ ಸೇವೆ ನೀಡಲು ಕಾವೇರಿ 2.0 ತಂತ್ರಾಂಶ ಅಳವಡಿಸಲು ಕಂದಾಯ ಇಲಾಖೆ ಮುಂದಾಗಿದೆ.
ಫೆಬ್ರವರಿ 2 ರ ಇಂದಿನಿಂದ ಮೈಸೂರು,ಮಂಗಳೂರು, ಬೆಳಗಾವಿ, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಇದನ್ನು ಜಾರಿಗೊಳಿಸಲಾಗುತ್ತಿದೆ.
ಹೊಸ ಕಾವೇರಿ 2.0 ತಂತ್ರಾಂಶದಿಂದ ಕಚೇರಿಗಳಿಗೆ ಅಲೆದಾಟ ತಪ್ಪಲಿದೆ. ಸರ್ವರ್ ಸಮಸ್ಯೆಯೂ ಬಗೆಹರಿಯಲಿದೆ. ನಕಲಿ ದಾಖಲೆ ಸೃಷ್ಟಿಸಿ ಭೂಕಬಳಿಕೆಗೆ ಬ್ರೇಕ್ ಬೀಳಲಿದೆ .
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada