ಉದ್ಘಾಟನೆಗೊಂಡ ಮರುದಿನವೇ ಕಿತ್ತು ಬಂದ ರಸ್ತೆ!

ಹು ನಿರೀಕ್ಷಿತ ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ನೆರವೇರಿಸಿದ್ದು, ಇದರ ಮಧ್ಯೆ ಬಿಡದಿ ಬೈಪಾಸ್ ಸೇತುವೆ ಮೇಲಿನ ರಸ್ತೆ ಕಿತ್ತು ಬಂದಿರುವ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರಾಮನಗರ ಕಡೆಯಿಂದ ಪ್ರಯಾಣಿಸುವಾಗ ಸಿಗುವ ಬಿಡದಿ ಬೈಪಾಸ್ ಮುಕ್ತಾಯದ ಜಾಗದಲ್ಲಿ ಸೇತುವೆ ಮೇಲಿನ ರಸ್ತೆ ಕಿತ್ತು ಬಂದಿದ್ದು, ಇದೀಗ ಒಂದು ಭಾಗದಲ್ಲಿ ವಾಹನಗಳು ಓಡಾಡದಂತೆ ಬ್ಯಾರಿಕೇಡ್ ಅಳವಡಿಸಿ ಇದರ ದುರಸ್ತಿ ಕಾರ್ಯ ನಡೆದಿದೆ.

ಈ ಹಿಂದೆ ಇದೆ ಜಾಗದಲ್ಲಿ ಲಾರಿ ಪಲ್ಟಿ ಆಗಿತ್ತು ಎನ್ನಲಾಗಿದ್ದು, ಜೊತೆಗೆ ವಾಹನಗಳು ಸ್ಕಿಡ್ ಆಗಿದ್ದವು ಎಂದು ತಿಳಿದುಬಂದಿದೆ. ಇದೀಗ ರಸ್ತೆ ಕಿತ್ತು ಬಂದಿರುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಹಲವರು, ಕಾಮಗಾರಿ ವೈಫಲ್ಯ ಎಂದು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಚಿತ್ರರಂಗಕ್ಕೆ ಮತ್ತೊಂದು ಶಾಕ್: ಜನಪ್ರಿಯ ನಟ ಸಮೀರ್ ಖಾಖರ್ ವಿಧಿವಶ!

Wed Mar 15 , 2023
ದೂರದರ್ಶನದ ಪ್ರಸಿದ್ಧ ಶೋ ‘ನುಕ್ಕಡ್’ ನಲ್ಲಿ ಖೋಪ್ಡಿ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ಹಿರಿಯ ನಟ ಸಮೀರ್ ಖಾಖರ್(71) ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಸತೀಶ್ ಕೌಶಿಕ್ ಅವರ ಸಾವಿನಿಂದ ಅಭಿಮಾನಿಗಳು ಇನ್ನೂ ತತ್ತರಿಸುತ್ತಿರುವಾಗ, ಇದು ಉದ್ಯಮಕ್ಕೆ ಮತ್ತೊಂದು ಹೊಡೆತವಾಗಿದೆ. ವರದಿಯ ಪ್ರಕಾರ, ಹಿರಿಯ ನಟ ಸಮೀರ್ ಅವರಿಗೆ ಮಂಗಳವಾರ ಉಸಿರಾಟದ ಸಮಸ್ಯೆ ಎದುರಿಸಿದ ನಂತರ ಮೂರ್ಛೆ ಹೋಗಿದ್ದಾರೆ. ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಐಸಿಯುಗೆ ದಾಖಲಿಸಲಾಗಿತ್ತು. ಚಿಕಿತ್ಸೆ ನಂತರ ಅವರನ್ನು ವೆಂಟಿಲೇಟರ್‌ನಲ್ಲಿ […]

Advertisement

Wordpress Social Share Plugin powered by Ultimatelysocial