ಬಹು ನಿರೀಕ್ಷಿತ “ಕ್ರೀಮ್” ಚಿತ್ರದ ಚಿತ್ರೀಕರಣ ಮುಕ್ತಾಯ.

 

ಖ್ಯಾತ ಲೇಖಕ ಅಗ್ನಿ ಶ್ರೀಧರ್ ಅವರು ಕಥೆ ಹಾಗೂ ಸಂಭಾಷಣೆ ಬರೆದಿರುವ, ದೇವೇಂದ್ರ ಡಿ.ಕೆ ನಿರ್ಮಿಸಿರುವ ಹಾಗೂ ಅಭಿಷೇಕ್ ಬಸಂತ್ ನಿರ್ದೇಶನದ “ಕ್ರೀಮ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ.

ಬಹು ನಿರೀಕ್ಷಿತ ಈ ಚಿತ್ರದ ನಾಯಕಿಯಾಗಿ ಸಂಯುಕ್ತ ಹೆಗಡೆ ಅಭಿನಯಿಸಿದ್ದಾರೆ. ಅಚ್ಯುತ್ ಕುಮಾರ್, ಅರುಣ್ ಸಾಗರ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಕಳೆದವರ್ಷ ಈ ಚಿತ್ರ ಆರಂಭವಾಗಿದ್ದು, ಶೀರ್ಷಿಕೆ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಆನಂತರ ಚಿತ್ರತಂಡದಿಂದ ಈ ಚಿತ್ರದ ಕುರಿತು ಯಾವುದೇ ವಿಷಯ ಹೊರಬಂದಿರಲಿಲ್ಲ. ಅಂತಹ ವಿಷಯ ಚಿತ್ರದಲ್ಲಿ ಏನಿರಬಹುದು?
ಎಂಬ ಕೌತುಕ ಎಲ್ಲರಲ್ಲೂ ಇದೆ.
ಬೆಂಗಳೂರಿನಲ್ಲಿ ನಡೆದ ನೈಜಘಟನೆ ಆಧರಿಸಿದ‌ ಚಿತ್ರವೆಂಬ ಮಾಹಿತಿ ಇದೆ. ಚಿತ್ರೀಕರಣದ ವೇಳೆ ನಾಯಕಿ ಸಂಯುಕ್ತ ಹೆಗಡೆ ಅವರಿಗೆ ಭಾರಿ ಪೆಟ್ಟು ಬಿದ್ದ ವಿಷಯ ಮಾತ್ರ ತಿಳಿದಿತ್ತು. ಸಂಯುಕ್ತ ಅವರು ಚೇತರಿಸಿಕೊಂಡ ನಂತರ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಈಗ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ಪೋಸ್ಟ್ ಪ್ರೊಡಕ್ಷನ್ ವರ್ಕ್ ಆರಂಭವಾಗಲಿದೆ.

ಸುನೋಜ್ ವೇಲಾಯುಧನ್ ಛಾಯಾಗ್ರಹಣ, ಶಿವು (ಕೆಜಿಎಫ್) ಕಲಾ ನಿರ್ದೇಶನ, ಆರ್ಯನ್ ಸಂಕಲನ ಹಾಗೂ ಪ್ರಭು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸುಂದರ ಹಾಡುಗಳಿಂದ ಪ್ರೇಕ್ಷಕರ ಗಮನ ಸೆಳೆದ ‘ಓ ಮನಸೇ’

Tue Jan 24 , 2023
ವಿಜಯ ರಾಘವೇಂದ್ರ, ಧರ್ಮ ಕೀರ್ತಿರಾಜ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ಓ ಮನಸೇ’ ಚಿತ್ರದ ಹಾಡುಗಳು ಬಿಡುಗಡೆಯಾಗಿದೆ. ಯೂಟ್ಯೂಬ್ ನಲ್ಲೂ ಹಾಡುಗಳು ಟ್ರೆಂಡ್ ಕ್ರಿಯೇಟ್ ಮಾಡಿದೆ. ‘ಶ್ರೀ ಫ್ರೆಂಡ್ಸ್ ಮೂವಿ ಮೆಕರ್ಸ್’ ಲಾಂಛನದಲ್ಲಿ ಎಂ.ಎನ್ ಭೈರೆಗೌಡ, ಕೆ.ಹೆಚ್. ಧನಂಜಯ, ಕೆ.ವೆಂಕಟೇಶ್, ಸು.ಕಾ ರಾಮು, ಯುವರಾಜ್ ಕೆ.ಎ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಇತ್ತೀಚೆಗೆ ನಡೆದ ಚಿತ್ರದ ಹಾಡುಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ಮಾಪಕರು, ‘ಇದು ನಮ್ಮ ಬ್ಯಾನರ್ ನಲ್ಲಿ ನಿರ್ಮಿಸಿರುವ ಮೊದಲ ಸಿನಿಮಾ. […]

Advertisement

Wordpress Social Share Plugin powered by Ultimatelysocial