ಟ್ರಾಫಿಕ್‌ ಫೈನ್‌ ಕಟ್ಟುವವರಿಗೆ ಸಿಹಿ ಸುದ್ದಿಯನ್ನು ರಾಜ್ಯ ಸರ್ಕಾರ ನೀಡಿದೆ.

ಬೆಂಗಳೂರು: ಟ್ರಾಫಿಕ್‌ ಫೈನ್‌ ಕಟ್ಟುವವರಿಗೆ ಸಿಹಿ ಸುದ್ದಿಯನ್ನು ರಾಜ್ಯ ಸರ್ಕಾರ ನೀಡಿದೆ. ಶೇಕಡ 50ರ ತನಕ ರಿಯಾಯಿತಿಯನ್ನು ನೀಡುವ ಬಗ್ಗೆ ರಾಜ್ಯ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಆದೇಶವನ್ನು ಹೊರಡಿಸಿದೆ. ಈ ಹಿಂದೆ ರಾಜ್ಯ ಹೈಕೋರ್ಟ್‌ನ ನ್ಯಾಯಾಧೀಶರಾದ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಹೈಕೋರ್ಟ್ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಈ ಬಗ್ಗೆ ಮನವಿ ಮಾಡಿಕೊಂಡಿದ್ದರು.ಈ ಹಿನ್ನಲೆಯಲ್ಲಿ ನ್ಯಾಯಮೂರ್ತಿಗಳ ಮನವಿ ಮೇರೆಗೆ ಈ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಈ ಆದೇಶವು ಫೆ 11ರೊಳಗೆ ಟ್ರಾಫಿಕ್‌ ಫೈನ್‌ ಕಟ್ಟುವವರಿಗೆ ಮಾತ್ರ ಅನ್ವಯವಾಗಲಿದೆ. ಇದು ಸೀಮತ ಅವಧಿಯಲ್ಲಿ ನಡೆಯಲಿದೆ. ಈ ಮೂಲಕ ನಿಗದಿತ ದಿನಾಂಕದೊಳಗೆ ಟ್ರಾಫಿಕ್ ರೂಲ್ಸ್‌ ಉಲ್ಲಂಘನೆ ಮಾಡಿ ದಂಡವನ್ನು ಪಾವತಿ ಮಾಡದೇ ತಪ್ಪಿಸಿಕೊಂಡು ಓಡಾಡುತ್ತಿರುವವರು ಮುಂದಿನ ಕಾನೂನಿನ ಕುಣಿಕೆಯಿಂದ ಬಚಾವ್‌ ಆಗಲು ಇದು ಸುವರ್ಣ ಅವಕಾಶವನ್ನು ನೀಡಿದೆ. ಫೆ 11ರಂದು ಲೋಕ ಅದಾಲತ್ ನಡೆಯಲಿದ್ದು, ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಈ ನಿರ್ಧಾರವನ್ನು ಮಾಡಿದೆ ಎನ್ನಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೆಟಿಎಂ ಬೈಕ್​ ಡಿಕ್ಕಿಯಾಗಿ ಯುವತಿಯೊಬ್ಬಳು ದುರಂತ ಸಾವಿಗೀಡಾಗಿರುವ ಘಟನೆ .

Fri Feb 3 , 2023
ಬೆಂಗಳೂರು: ಕೆಟಿಎಂ ಬೈಕ್​ ಡಿಕ್ಕಿಯಾಗಿ ಯುವತಿಯೊಬ್ಬಳು ದುರಂತ ಸಾವಿಗೀಡಾಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಪ್ಲೈಓವರ್ ರಸ್ತೆಯಲ್ಲಿ ನಿನ್ನೆ (ಫೆ.2) ರಾತ್ರಿ ನಡೆದಿದೆ. ಶುಭಶ್ರೀ (28) ಅಪಘಾತದಲ್ಲಿ ಮೃತಪಟ್ಟ ಯುವತಿ. ಈಕೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಗೊಲ್ಲಹಳ್ಳಿಯ ಅವನಿ ಅಲೈನ್ ಅಪಾರ್ಟ್​ಮೆಂಟ್​ನ ನಿವಾಸಿ. ಸ್ನೈಡರ್ ಕಂಪನಿಯಲ್ಲಿ ಮಾರ್ಕೆಟಿಂಗ್ ಕೆಲಸ ಮಾಡುತ್ತಿದ್ದರು. ರಾಯಲ್ ಎನ್​ಫೀಲ್ಡ್ ಬೈಕ್​​ನಲ್ಲಿ ಹಿಂಬದಿ ಕುಳಿತು ಸಂಚರಿಸುತ್ತಿದ್ದರು. ಈ ವೇಳೆ ಹಿಂಬದಿಯಿಂದ ಅತಿವೇಗವಾಗಿ ಬಂದ ಕೆಟಿಎಂ ಬೈಕ್ ಸವಾರ, ರಾಯಲ್ […]

Advertisement

Wordpress Social Share Plugin powered by Ultimatelysocial