ʼಅಮ್ಮಾ..ನನ್ನನ್ನು ಉಳಿಸುʼ ಎಂದಿದ್ದ ಯುವಕ!

ಘಾತಕಾರಿ ಘಟನೆಯೊಂದರಲ್ಲಿ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಅಸ್ಸಾಂನ ಲುಮ್ಡಿಂಗ್‌ನಿಂದ ಬಂದ ಯುವಕನನ್ನು ಎರಡು ತುಂಡುಗಳಾಗಿ ಕತ್ತರಿಸಲಾಗಿದೆ.

ವರದಿಗಳ್ರಕಾರ ಯುವಕ ತನ್ನ ತಾಯಿಗೆ ಕರೆ ಮಾಡಿ, “ಮಾ, ದಯವಿಟ್ಟು ನನ್ನನ್ನು ಉಳಿಸಿ, ಅವರು ನನ್ನನ್ನು ಕೊಲ್ಲಲು ಹೊರಟಿದ್ದಾರೆ.

ನಾನು ನಿಮ್ಮನ್ನು ಮತ್ತೆ ನೋಡಲು ಸಾಧ್ಯವಾಗುವುದಿಲ್ಲ. ದಯವಿಟ್ಟು ನನ್ನನ್ನು ಉಳಿಸಿ ಮಾ” ಎಂದು ಅಂಗಲಾಚಿದ್ದಾನೆ.

ಉತ್ತರ ಪ್ರದೇಶದ ಗೋರಖ್‌ಪುರದ ರೈಲ್ವೇ ಹಳಿಯಲ್ಲಿ ಟುಟಾನ್ ದೆ ಎಂದು ಗುರುತಿಸಲಾದ ಯುವಕನ ಶವ ಎರಡು ತುಂಡುಗಳಾಗಿ ಪತ್ತೆಯಾಗಿದೆ.

ರೈಲಿನ ಎಸಿ ಕಂಪಾರ್ಟ್‌ಮೆಂಟ್‌ನಲ್ಲಿ ಬೆಡ್‌ರೋಲ್ ಪ್ರೊವೈಡರ್ ಆಗಿ ಟುಟಾನ್ ದೆ ನೇಮಕಗೊಂಡಿದ್ದರು. ಅವರು ಮಾರ್ಚ್ 1 ರಂದು ಲುಮ್‌ಡಿಂಗ್‌ನಿಂದ ದಿಬ್ರುಗಢ್‌ಗೆ ಪ್ರಯಾಣ ಪ್ರಾರಂಭಿಸಿದ್ದರು. ನಂತರ ದಿಬ್ರುಗಢದಿಂದ ದಿಬ್ರುಗಢ್-ಗೋರಖ್‌ಪುರ ವಿಶೇಷ ಹೋಳಿ ರೈಲಿನಲ್ಲಿ ಬೆಡ್‌ರೋಲ್ ಪೂರೈಕೆದಾರರಾಗಿ ಕೆಲಸ ಮಾಡಿದರು.

ಟುಟಾನ್‌ನನ್ನು ರೈಲಿನೊಳಗೆ ಕೊಂದು ಆತನ ಶವವನ್ನು ಗೋರಖ್‌ಪುರ ನಿಲ್ದಾಣದ ರೈಲ್ವೆ ಹಳಿ ಮೇಲೆ ಎಸೆದಿರುವುದಾಗಿ ಮೃತನ ಕುಟುಂಬ ಶಂಕಿಸಿದೆ. ಕೊಲ್ಲುವ ಮೊದಲು, ಟುಟಾನ್ ತನ್ನ ತಾಯಿಗೆ ಕರೆ ಮಾಡಿ ತನ್ನನ್ನು ಹತ್ಯೆ ಮಾಡುತ್ತಿರುವುದಾಗಿ ಮತ್ತು ಈತನನ್ನು ಹೇಗೆ ಕೊಲ್ಲಬೇಕು ಎಂಬ ಬಗ್ಗೆ ಶಂಕಿತರು ಪ್ಲಾನ್ ಮಾಡಿದ್ದಾರೆ ಎಂದು ಹೇಳಿದ್ದರು. ನಿಗೂಢ ಹತ್ಯೆಯ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪ್ರತಿ ಶನಿವಾರ ರಾಜ್ಯ ಸರ್ಕಾರಿ ನೌಕರರಿಗೆ ರಜೆ ಸಿಗುತ್ತಾ..?

Wed Mar 8 , 2023
ಬೆಂಗಳೂರು :ಕೇಂದ್ರ ಸರ್ಕಾರ ನೌಕರರದ್ದು ಅಯ್ತು, ಇದೀಗ ರಾಜ್ಯ ಸರ್ಕಾರಿ ನೌಕರರ ಸರದಿ ಶುರುವಾಗಿದೆ. ವೇತನ ಹೆಚ್ಚಳವಾಗುತ್ತಿದ್ದಂತೆ, ಶನಿವಾರ ರಜೆ ನೀಡುವಂತೆ 7ನೇ ವೇತನ ಆಯೋಗ ಸಮಿತಿಗೆ ರಾಜ್ಯ ಸರ್ಕಾರಿ ನೌಕರರ ಸಂಘ ಬೇಡಿಕೆ ಸಲ್ಲಿಸಿದೆ. ಇನ್ನು ಈ ಬಗ್ಗೆ ಮಾಹಿತಿ ನೀಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್ ಷಡಕ್ಷರಿ,ಪ್ರತೀ ಶನಿವಾರ ರಜೆ ನೀಡಿ, ಅದರ ಬದಲು ನಾವು ಪ್ರತಿ ದಿನ ಅರ್ಧ ಗಂಟೆ ಮುಂಚಿತ ಹಾಗೂ […]

Advertisement

Wordpress Social Share Plugin powered by Ultimatelysocial