ಮೂಢನಂಬಿಕೆಗೆ ಒಳಗಾಗಿ ಕೆಲವರು ತಮ್ಮ ಮಕ್ಕಳ ಪ್ರಾಣವನ್ನೇ ಪಣವಾಗಿಟ್ಟ ಹಲವು ಘಟನೆಗಳು ಈ ಹಿಂದೆ ನಡೆದಿವೆ.

ಮೂಢನಂಬಿಕೆಗೆ ಒಳಗಾಗಿ ಕೆಲವರು ತಮ್ಮ ಮಕ್ಕಳ ಪ್ರಾಣವನ್ನೇ ಪಣವಾಗಿಟ್ಟ ಹಲವು ಘಟನೆಗಳು ಈ ಹಿಂದೆ ನಡೆದಿವೆ. ಚಿಕ್ಕ ಮಕ್ಕಳು ತೀವ್ರ ಅನಾರೋಗ್ಯದಿಂದ ಬಳಲುತ್ತಿರುವಾಗ ಆಸ್ಪತ್ರೆಗೆ ಹೋಗುವ ಬದಲು ಮಂತ್ರವಾದಿಯ ಮೊರೆ ಹೋಗುವುದು ಹಾಗೂ ತಮಗೆ ತಿಳಿದ ಮದ್ದು ನೀಡಲು ಯತ್ನಿಸುವುದು ಮಾಡಿ ಮಕ್ಕಳ ಪ್ರಾಣಕ್ಕೆ ಸಂಚಕಾರ ತರುತ್ತಾರೆ.

ಈಗ ಮಧ್ಯಪ್ರದೇಶದ ಶಾಡೋಲ್ ಜಿಲ್ಲೆಯಲ್ಲಿ ಅಂತವುದೇ ಒಂದು ಘಟನೆ ನಡೆದಿದ್ದು, ನ್ಯುಮೋನಿಯಾದಿಂದ ಬಳಲುತ್ತಿದ್ದ ಮೂರು ತಿಂಗಳ ಹೆಣ್ಣು ಮಗುವಿಗೆ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಬದಲು ಕಾದ ಕಬ್ಬಿಣದಿಂದ ಹೊಟ್ಟೆಯ ಮೇಲೆ 51 ಬಾರಿ ಬರೆ ಹಾಕಲಾಗಿದೆ. ಕಾದ ಕಬ್ಬಿಣದ ಬರೆ ಹಾಕಿದರೆ ಗುಣಮುಖವಾಗುತ್ತದೆ ಎಂಬ ಮೂಢನಂಬಿಕೆಯಿಂದ ಈ ಕೆಲಸ ಮಾಡಲಾಗಿದೆ.

ಮಗುವಿನ ಆರೋಗ್ಯ ಪರಿಸ್ಥಿತಿ ಬಿಗಡಾಯಿಸಿದಾಗ ಆಸ್ಪತ್ರೆಗೆ ಕರೆದುಕೊಂಡು ಹೋದ ವೇಳೆ ಕೃತ್ಯ ಬೆಳಕಿಗೆ ಬಂದಿದೆ. ಸಕಾಲಕ್ಕೆ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ಮಗು ಮೃತಪಟ್ಟಿದ್ದು, ಇದೀಗ ಮಕ್ಕಳ ಕಲ್ಯಾಣ ಇಲಾಖೆಯಿಂದ ಆರೋಪಿ ಮಹಿಳೆ ವಿರುದ್ಧ ದೂರು ನೀಡಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸ್ನೇಹಿತನನ್ನು ಕೊಂದು ಘಾಟ್‌ನಿಂದ ಎಸೆಯುವಾಗ ಕಾಲು ಜಾರಿ ಬಿದ್ದು ಆರೋಪಿ ಸಾವು.

Sat Feb 4 , 2023
ಮಹಾರಾಷ್ಟ್ರ: ಹಣಕಾಸಿನ ವಿಚಾರಕ್ಕೆ ತನ್ನ ಸ್ನೇಹಿತನನ್ನು ಕೊಲೆ ಮಾಡಿದ 30 ವರ್ಷದ ವ್ಯಕ್ತಿಯೊಬ್ಬ ಶವವನ್ನು ಘಾಟ್‌ನಿಂದ ಎಸೆಯಲು ಹೋಗಿ ಕಾಲು ಜಾರಿ ತಾನೂ ಸಾವನ್ನಪ್ಪಿದ ವಿಪರ್ಯಾಸ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಆದ್ರೆ, ಮೃತ ದೇಹವನ್ನು ಎಸೆಯಲು ವ್ಯಕ್ತಿಗೆ ಸಹಾಯ ಮಾಡುತ್ತಿದ್ದ ಸಹಾಯಕ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾನೆ. ಕೊಲ್ಲಾಪುರದಿಂದ ಸಾವಂತವಾಡಿಯ ಅಂಬೋಲಿ ಘಾಟ್‌ನಲ್ಲಿ ಈ ಘಟನೆ ನಡೆದಿದೆ. ಭೌಸೋ ಮಾನೆ ಎಂಬ 30 ವರ್ಷದ ವ್ಯಕ್ತಿ ಹಣಕಾಸಿನ ವಿಚಾರಕ್ಕೆ ತನ್ನ […]

Advertisement

Wordpress Social Share Plugin powered by Ultimatelysocial