ಒಬ್ಬ ಶಾಸಕನಾಗಿ ಕೆಲಸ ಮಾಡಲು ಇನ್ನೂ ಅವಕಾಶವಿದೆ..!

ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ. ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ. ಒಬ್ಬ ಶಾಸಕನಾಗಿ ಕೆಲಸ ಮಾಡಲು ಇನ್ನೂ ಅವಕಾಶವಿದೆ,  ಶೆಟ್ಟರ್‌ಗೆ ಟಿಕೆಟ್ ಇಲ್ಲಾ ಅನ್ನೋ ವಾತಾವರಣ ಯಾಕೆ ಬಂತು ಗೊತ್ತಿಲ್ಲ.? ಯಾವುದೇ ಕಳಂಕ ನನ್ನ ಮೇಲೆ ಇಲ್ಲಾ..! ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಸಂಘಟಿಸಿ, ಶಕ್ತಿ‌ ಕೊಡುವ ಕೆಲಸ ಮಾಡಿದ್ದೇನೆ.

ಪಕ್ಷ ನನಗೆ ಕೊಟ್ಟಿರುವ ಅವಕಾಶಕ್ಕೆ ಧನ್ಯವಾದ ಹೇಳುತ್ತೇನೆ.  ಅಪೂರ್ಣ ಕೆಲಸ ಪರಿಪೂರ್ಣ ಮಾಡಲು ಮತ್ತೊಂದು ಅವಕಾಶ ಕೊಡಬೇಕು. ಸಾಯಂಕಾಲದವರೆಗೆ ಕಾಯ್ದು ನೋಡುತ್ತೇನೆ,  ಸಿಎಂ ನನ್ನ ಜೊತೆ ಹಲವು ವಿಚಾರಗಳ ಚರ್ಚೆ ಮಾಡಿದ್ದಾರೆ.

ಕಳೆದ ಮೂರು ತಿಂಗಳಿಂದ ನನ್ನ ರಾಜಕೀಯ ಜೀವನದ ಕೆಟ್ಟ ದಿನಗಳು ಬಂದಿವೆ..! ಕೆಟ್ಟ ದಿನ ಹೊರ ಹೋಗಿ ಒಳ್ಳೆ ದಿನಗಳು ಬರುತ್ತೆ ಅನ್ನೋ ನಿರೀಕ್ಷೆಯಿದೆ. ಜೋಶಿಯವರು ಕೇಂದ್ರ ನಾಯಕರ ಪ್ರತಿನಿಧಿಯಾಗಿ ಬಂದಿದ್ದರು. ಅವರ ಬಳಿ ನಮ್ಮ ವಿಚಾರಗಳನ್ನು ತಿಳಿಸಿದ್ದೇವೆ, ಸಂಜೆಯವರೆಗೆ ಕಾಯಲು ಹೇಳಿದ್ದಾರೆ,  ಸಂಜೆವರೆಗೆ ನೋಡಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇನೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಂಜನಗೂಡು ಕ್ಷೇತ್ರದಿಂದ ಮೊದಲ ನಾಮಪತ್ರ ಸಲ್ಲಿಕೆ..!

Sat Apr 15 , 2023
ನಂಜನಗೂಡು ಕ್ಷೇತ್ರದಿಂದ ಮೊದಲ ನಾಮಪತ್ರ ಸಲ್ಲಿಕೆ. ಆಮ್ ಆದ್ಮಿ ಪಕ್ಷದಿಂದ ಅಭ್ಯರ್ಥಿಯಾಗಿ ಹನುಮಯ್ಯ ನಾಮಪತ್ರ ಸಲ್ಲಿಕೆ. ರಾಜ್ಯದಲ್ಲಿ 2023ರ ಸಾರ್ವತ್ರಿಕ ಚುನಾವಣೆಯ ಕಣ ರಂಗೇರಿದೆ. ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಮೊದಲ ನಾಮಪತ್ರ ಸಲ್ಲಿಕೆಯಾಗಿದ್ದು, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಹನುಮಯ್ಯ ಚುನಾವಣಾ ಅಧಿಕಾರಿ ಕೃಷ್ಣಮೂರ್ತಿ ಅವರಿಗೆ ನಾಮಪತ್ರವನ್ನು ಸಲ್ಲಿಕೆ ಮಾಡಿದರು. ನಂಜನಗೂಡು ತಾಲ್ಲೂಕು ಆಡಳಿತ ಭವನಕ್ಕೆ‌ ತೆರಳಿ ನಾಮಪತ್ರ ಸಲ್ಲಿಸಿದರು.  ಬಳಿಕ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಹನುಮಯ್ಯ ಮಾತನಾಡಿ, […]

Advertisement

Wordpress Social Share Plugin powered by Ultimatelysocial