ಹುಂಡಿ ಒಡೆದು ಹಣ ಕಳವು.

ಮೈಸೂರು: ದೇವಾಲಯದ ಬಾಗಿಲು ಮೀಟಿ ಒಳ ನುಗ್ಗಿರುವ ಖದೀಮರು ಹುಂಡಿ ಹಣವನ್ನು ಕಳವು ಮಾಡಿದ್ದಾರೆ. ಮೈಸೂರು ತಾಲ್ಲೂಕು ಇಲವಾಲ ಹೋಬಳಿಯ ಬೊಮ್ಮನಹಳ್ಳಿಯ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಕಳ್ಳತನ ನಡೆದಿದೆ. ಫೆ.20ರಂದು ರಾತ್ರಿ 8 ಗಂಟೆ ಸಮಯದಲ್ಲಿ ದೇವಾಲಯದ ಪೂಜಾರಿಯವರು ದೇವಸ್ಥಾನದ ಬಾಗಿಲಿಗೆ ಬೀಗ ಹಾಕಿಕೊಂಡು ಹೋಗಿದ್ದರು.ಮರು ದಿನ ಬೆಳಿಗ್ಗೆ 6 ಗಂಟೆಯ ಸಮಯದಲ್ಲಿ ದೇವಾಲಯಕ್ಕೆ ಬಂದು ನೋಡಿದಾಗ ದೇವಾಲಯದ ಬಾಗಿಲು ಮೀಟಿ ಒಳ ನುಗ್ಗಿರುವ ಖದೀಮರು ಗೋಲಕವನ್ನು ಹೊರಗೆ ತಂದು ಒಡೆದು ಅದರಲ್ಲಿದ್ದ ಹಣ ಕಳವು ಮಾಡಿರುವುದು ತಿಳಿದುಬಂದಿದೆ. ಈ ಸಂಬಂಧ ಇಲವಾಲ ಠಾಣೆಯಲ್ಲಿ ದೂರು ದಾಖಲಾಗಿದ್ದು, ಗೋಲಕದಲ್ಲಿ ಸುಮಾರು ೨೫ ಸಾವಿರ ರೂ. ಇತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannad

 

Please follow and like us:

Leave a Reply

Your email address will not be published. Required fields are marked *

Next Post

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Fri Feb 24 , 2023
ಮೈಸೂರು: ವ್ಯಕ್ತಿಯೊಬ್ಬ ಮನೆಗೆ ಬಾಡಿಗೆಗೆ ಬರುವುದಾಗಿ ಹೇಳಿ ಮನೆ ಮಾಲೀಕರಿಗೆ 2.40 ಲಕ್ಷ ರೂ. ವಂಚಿಸಿದ್ದಾನೆ. ಹೆಬ್ಬಾಳ ೨ನೇ ಹಂತದ ನಿವಾಸಿ ಎಚ್.ಎಸ್.ಚಂದನ್ ಎಂಬವರೇ ಹಣ ಕಳೆದುಕೊಂಡವರು. ಇವರು ಮ್ಯಾಜಿಕ್ ಬ್ರಿಕ್ಸ್ ವೆಬ್‌ಸೈಟ್‌ನಲ್ಲಿ ಮನೆ ಬಾಡಿಗೆಗೆ ಇರುವುದಾಗಿ ಪೋಸ್ಟ್ ಹಾಕಿದ್ದರು.ಇವರನ್ನು ಆನ್‌ಲೈನ್ ಮೂಲಕ ಸಂಪರ್ಕಿಸಿದ ದೀಪಕ್ ಎಂಬ ಹೆಸರಿನ ವ್ಯಕ್ತಿಯು ತಾನು ಸೇನೆಯಲ್ಲಿ ಕೆಲಸ ಮಾಡುತ್ತಿದ್ದು, ಬಾಡಿಗೆ ಬರುವುದಾಗಿ ಹೇಳಿದ್ದಾನೆ. ನಂತರ ಮುಂಗಡ ಹಣ ನೀಡುವುದಾಗಿ ಹೇಳಿ ಚಂದನ್ ಅವರಿಂದ […]

Advertisement

Wordpress Social Share Plugin powered by Ultimatelysocial