ಮೈಸೂರು: ದೇವಾಲಯದ ಬಾಗಿಲು ಮೀಟಿ ಒಳ ನುಗ್ಗಿರುವ ಖದೀಮರು ಹುಂಡಿ ಹಣವನ್ನು ಕಳವು ಮಾಡಿದ್ದಾರೆ. ಮೈಸೂರು ತಾಲ್ಲೂಕು ಇಲವಾಲ ಹೋಬಳಿಯ ಬೊಮ್ಮನಹಳ್ಳಿಯ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಕಳ್ಳತನ ನಡೆದಿದೆ. ಫೆ.20ರಂದು ರಾತ್ರಿ 8 ಗಂಟೆ ಸಮಯದಲ್ಲಿ ದೇವಾಲಯದ ಪೂಜಾರಿಯವರು ದೇವಸ್ಥಾನದ ಬಾಗಿಲಿಗೆ ಬೀಗ ಹಾಕಿಕೊಂಡು ಹೋಗಿದ್ದರು.ಮರು ದಿನ ಬೆಳಿಗ್ಗೆ 6 ಗಂಟೆಯ ಸಮಯದಲ್ಲಿ ದೇವಾಲಯಕ್ಕೆ ಬಂದು ನೋಡಿದಾಗ ದೇವಾಲಯದ ಬಾಗಿಲು ಮೀಟಿ ಒಳ ನುಗ್ಗಿರುವ ಖದೀಮರು ಗೋಲಕವನ್ನು ಹೊರಗೆ ತಂದು ಒಡೆದು ಅದರಲ್ಲಿದ್ದ ಹಣ ಕಳವು ಮಾಡಿರುವುದು ತಿಳಿದುಬಂದಿದೆ. ಈ ಸಂಬಂಧ ಇಲವಾಲ ಠಾಣೆಯಲ್ಲಿ ದೂರು ದಾಖಲಾಗಿದ್ದು, ಗೋಲಕದಲ್ಲಿ ಸುಮಾರು ೨೫ ಸಾವಿರ ರೂ. ಇತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannad