ಕೊರೋನ ಹಾವಳಿ ಕಡಿಮೆಯಾದ ಮೇಲೆ ಕನ್ನಡ ಚಿತ್ರರಂಗ ಮೊದಲಿನಂತೆ ತನ್ನ ವೈಭವಕ್ಕೆ ಮರಳುತ್ತಿದೆ. ಸಾಲುಸಾಲು ಚಿತ್ರಗಳು ತೆರೆಗೆ ಬರುತ್ತಿದೆ.
ಆ ಪೈಕಿ ವಿಭಿನ್ನ ಕಥೆಯ “ತ್ರಿಕೋನ” ಸಹ ಏಪ್ರಿಲ್ ಒಂದರಂದು ಬಿಡುಗಡೆಯಾಗಲಿದೆ.
ಈ ವಿಷಯ ಹಂಚಿಕೊಳ್ಳಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.
ನಿರ್ಮಾಣ ಮಾಡಿರುವ ರಾಜಶೇಖರ್ ಅವರೆ ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ. 143 ಚಿತ್ರವನ್ನು ನಿರ್ದೇಶಿಸಿದ್ದ ಚಂದ್ರಕಾಂತ್ “ತ್ರಿಕೋನ” ವನ್ನು ನಿರ್ದೇಶಿಸಿದ್ದಾರೆ.
ಎಲ್ಲಾ ಮನುಷ್ಯನಲ್ಲೂ ಮನಸ್ಸಿದೆ. ಆ ಮನಸ್ಸನ್ನು ನಾವು ಕ್ರೀಡಾ ಮೈದಾನ ಎನ್ನಬಹುದು. ಏಕೆಂದರೆ ಮನಸ್ಸಿನಲ್ಲಿ ಮೋಸ, ದ್ವೇಷ, ಅಸೂಯೆ, ಸೇಡು, ದುರಾಸೆ ಎಂಬ ಕ್ರೀಡೆಗಳು ನಡೆಯುತ್ತಿರುತ್ತದೆ. ಇದರಲ್ಲಿ ಅಹಂ, ಶಕ್ತಿ ಹಾಗೂ ತಾಳ್ಮೆ ಎಂಬ ಸ್ಪರ್ಧಿಗಳು ಇದ್ದಾರೆ. ಈ ಮೂವರಲ್ಲಿ ಗೆಲವು ಯಾರಿಗೆ? ಎಂದು ನೋಡಲು ನೀವು ನಮ್ಮ ಸಿನಿಮಾ ನೋಡಬೇಕು ಎಂದರು ನಿರ್ದೇಶಕರು.ಚಿತ್ರದಲ್ಲಿ ನಟಿಸಿರುವ ರಾಜವೀರ್ ಹಾಗೂ ಮಾರುತೇಶ್ ಪಾತ್ರ ಪರಿಚಯ ಮಾಡಿಕೊಟ್ಟರು.ಪೊಲೀಸ್ ಪ್ರಕಿ ಪ್ರೊಡಕ್ಷನ್ ಲಾಂಛನದಲ್ಲಿ ರಾಜಶೇಖರ್ ನಿರ್ಮಿಸಿರುವ ಈ ಚಿತ್ರವನ್ನು ಚಂದ್ರಕಾಂತ್ ನಿರ್ದೇಶಿಸಿದ್ದಾರೆ. ಸುರೇಂದ್ರನಾಥ್ ಸಂಗೀತ ನಿರ್ದೇಶನ ಹಾಗೂ ಶ್ರೀನಿವಾಸ್ ವಿನ್ನಕೋಟ ಛಾಯಾಗ್ರಹಣ ಈ ಚಿತ್ರಕ್ಕಿದೆ.ಸುರೇಶ್ ಹೆಬ್ಳೀಕರ್, ಲಕ್ಷ್ಮೀ, ಅಚ್ಯುತಕುಮಾರ್, ಸುಧಾರಾಣಿ, ಸಾಧುಕೋಕಿಲ, ಮಾರುತೇಶ್, ರಾಜವೀರ್, ಬೇಬಿ ಅದಿತಿ, ಬೇಬಿ ಹಾಸಿನಿ, ಮನದೀಪ್ ರಾಯ್, ರಾಕ್ ಲೈನ್ ಸುಧಾಕರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada