ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬಂದಿದ್ದ ರಾಯಚೂರಿನ ದಂಪತಿ ಬಾಳಲ್ಲಿ ದುರಂತ: ಕಾರಿನಲ್ಲೇ ನವವಿವಾಹಿತೆ ಜಲಸಮಾಧಿ!

ಆಂಧ್ರ: ಸಾವು ಯಾವಾಗ? ಹೇಗೆ ಬರುತ್ತೆ ಎಂದು ಊಹಿಸಲೂ ಸಾಧ್ಯವಿಲ್ಲ ಎಂಬುದಕ್ಕೇ ಈ ಘಟನನೆಯೇ ಸಾಕ್ಷಿ. ನೂರಾರು ಕನಸಿನ ಬುತ್ತಿಯೊಂದಿಗೆ ಕಳೆದ ತಿಂಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಯುವತಿಯೊಬ್ಬಳು, ತಿರುಪತಿ ತಿಮ್ಮಪ್ಪನ ದರ್ಶನಕ್ಕೆಂದು ಹೋಗುವಾಗ ದುರಂತ ಅಂತ್ಯ ಕಂಡಿದ್ದಾಳೆ. ಗಂಡ ಮತ್ತು ಕುಟುಂಬಸ್ಥರ ಕಣ್ಣೆದುರಲ್ಲೇ ಜಲಸಮಾಧಿಯಾಗಿದ್ದಾಳೆ.

ಕರ್ನಾಟಕದ ರಾಯಚೂರು ಮೂಲದ ನವ ದಂಪತಿ ಸೇರಿ 7 ಮಂದಿ ಕಾರಿನಲ್ಲಿ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆಯಲೆಂದು ಶುಕ್ರವಾರ ಬಂದಿದ್ದರು. ಶುಕ್ರವಾರ ರಾತ್ರಿ ತಿರುಪತಿಯಲ್ಲಿ ಧಾರಾಕಾರ ಮಳೆಯಾಗಿದ್ದು, ವೆಸ್ಟ್​ ಚರ್ಚ್ ಸಮೀಪದ ರೈಲ್ವೆ ಅಂಡರ್​ ಪಾಸ್​ ಬ್ರಿಡ್ಜ್​ ಬಳಿ ನೆರೆ ಪರಿಸ್ಥಿತಿ ಸೃಷ್ಟಿಯಾಗಿತ್ತು. 8 ಅಡಿಗೂ ಹೆಚ್ಚು ಆಳದವರೆಗೂ ಮಳೆ ನೀರು ನಿಂತಿತ್ತು. ಈ ವೇಳೆ ನೀರಿನ ಆಳ ಅರಿಯದ ಚಾಲಕ, ಕಾರನ್ನ ಚಲಿಸಿದ್ದು, ನೋಡನೋಡುತ್ತಿದ್ದ ಕಾರು ನೀರಲ್ಲಿ ಮುಳುಗಿದೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಕಾರಿನಲ್ಲಿದ್ದವರನ್ನ ಹೊರ ತೆಗೆಯಲು ಹರಸಾಹಸ ಪಟ್ಟರು.

ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿ ಕಾರಿನಲ್ಲಿದ್ದ 7 ಮಂದಿ ಪೈಕಿ 6 ಮಂದಿಯನ್ನ ಸುರಕ್ಷಿತವಾಗಿ ಹೊರಕ್ಕೆ ಕರೆತಂದಿದ್ದು, ನವವಧು ಕಾರಿನಲ್ಲೇ ಮೃತಪಟ್ಟಿದ್ದಾರೆ. ತನ್ನ ಕಣ್ಣೆದುರಲ್ಲೇ ಪತ್ನಿ ಜಲಸಮಾಧಿಯಾಗಿದ್ದನ್ನ ಕಂಡ ನವವಿವಾಹಿತನ ಆಕ್ರಂದನ ಮುಗಿಲು ಮುಟ್ಟಿತ್ತು.

 

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಮಿತ್​ ಷಾ ಬರ್ತಡೇಗೆ ಶುಭಕೋರಿ ಟ್ರೋಲ್​ ಆದ ಸಾರಾ ಅಲಿ ಖಾನ್..!​

Sat Oct 23 , 2021
ಮುಂಬೈ: ಕಳೆದ 12 ತಿಂಗಳಿಂದ ಬಾಲಿವುಡ್​ ಇಂಡಸ್ಟ್ರಿ ಮಾದಕದ್ರವ್ಯ ನಿಯಂತ್ರಣ ಸಂಸ್ಥೆ (ಎನ್​ಸಿಬಿ) ಹಾಗೂ ಜಾರಿ ನಿರ್ದೇಶನಾಲಯ (ಇಡಿ)ದ ಕಣ್ಗಾವಲಿನಲ್ಲಿದೆ. ಬಾಲಿವುಡ್​ ಸೆಲೆಬ್ರಿಟಿಗಳಿಗೆ ಸಂಬಂಧಿಸಿದ ಮಾದಕ ಜಾಲದ ನಂಟು ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಎರಡು ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಈ ಎಲ್ಲ ಬೆಳವಣಿಗೆಯಿಂದ ಬಾಲಿವುಡ್​ ಸೆಲೆಬ್ರಿಟಿಗಳಲ್ಲಿ ಭಯ ಶುರುವಾಗಿದೆ. ಯಾವಾಗ? ಯಾರು? ದಾಳಿ ಮಾಡುತ್ತಾರೆಂಬ ಆತಂಕವಿದೆ. ಅದರಲ್ಲೂ ಇತ್ತೀಚೆಗೆ ಮಾದಕ ಜಾಲ ನಂಟು ಬಾಲಿವುಡ್​ಗೂ ಬೆಸೆದುಕೊಂಡಿರುವುದರಿಂದ ಯುವ ಕಲಾವಿದರಲ್ಲಿ […]

Advertisement

Wordpress Social Share Plugin powered by Ultimatelysocial