ಪ್ರಕೃತಿಯ ಮಡಿಲಿಲ್ಲದ್ದುಕೊಂಡು ಅಪರೂಪದ ಕೆಲಸಕ್ಕೆ ಈ ಜೋಡಿ ಸಾಕ್ಷಿಯಾಗಿದ್ದಾರೆ.

ನ್ನಡದ ಖ್ಯಾತ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಈ ಬಾರಿಯ ಪ್ರೇಮಿಗಳ ಹಬ್ಬವನ್ನು ಆಚರಿಸಲು ಬೆಂಗಳೂರು ತೊರೆದಿದ್ದಾರೆ. ಪ್ರಕೃತಿಯ ಮಡಿಲಿಲ್ಲದ್ದುಕೊಂಡು ಅಪರೂಪದ ಕೆಲಸಕ್ಕೆ ಈ ಜೋಡಿ ಸಾಕ್ಷಿಯಾಗಿದ್ದಾರೆ. ಸ್ವತಃ ಸಾಹಿತ್ಯ ಪ್ರೇಮಿಯೂ ಆಗಿರುವ ವಸಿಷ್ಠ ಸಿಂಹ ಪ್ರೇಮಿಗಳ ದಿನದಂದು ಖ್ಯಾತ ಲೇಖಕ ಶಿವಕುಮಾರ ಮಾವಲಿ ಬರೆದ ‘ಪ್ರೇಮಪತ್ರದ ಆಫೀಸು ಮತ್ತು ಅವಳು’ ಪುಸ್ತಕವನ್ನು ಪತ್ನಿ ಹರಿಪ್ರಿಯಾ ಜೊತೆಯಾಗಿ ಬಿಡುಗಡೆ ಮಾಡಿದ್ದಾರೆ.

ಸಾಕಷ್ಟು ವರ್ಷಗಳ ಕಾಲ ಪ್ರೀತಿಸಿ, ಇತ್ತೀಚಿಗಷ್ಟೆ ದಂಪತಿಗಳಾಗಿರುವ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ವ್ಯಾಂಲಂಟೈನ್ ಡೇ ಅನ್ನು ಈ ಬಾರಿ ವಿಶೇಷವಾಗಿ ಮತ್ತು ಅರ್ಥಪೂರ್ಣವಾಗಿ ಸೆಲಬ್ರೇಟ್ ಮಾಡಿಕೊಂಡಿದ್ದೇವೆ ಎಂದಿದ್ದಾರೆ. ಪ್ರೇಮಿಗಳ ದಿನಾಚರಣೆಯಂದು ಒಂದು ಪ್ರೇಮಕತೆಗಳ ಪುಸ್ತಕವನ್ನು ಲೋಕಾರ್ಪಣೆ ಮಾಡುವುದರ ಮೂಲಕ ತಮ್ಮ ಪ್ರೇಮದ ದಿನಗಳನ್ನೂ ಜೋಡಿ ಹಕ್ಕಿಗಳು ಮೆಲುಕು ಹಾಕಿದ್ದಾರೆ.

ಮಾವಲಿ ಪಬ್ಲಿಕೇಶನ್ ನ ಮೊದಲ ಪುಸ್ತಕ ಇದಾಗಿದ್ದು, ‘ಪ್ರೇಮಪತ್ರದ ಆಫೀಸು ಮತ್ತು ಅವಳು’ ಎಂಬ ವಿಶಿಷ್ಟ ಶೀರ್ಷಿಕೆಯನ್ನು ಹೊಂದಿದೆ. ಅಲ್ಲದೇ, ಇದೊಂದು ಕಥಾ ಸಂಕಲನವಾಗಿದೆ. ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ಲೇಖಕ ಶಿವಕುಮಾರ ಮಾವಲಿ , ಪ್ರಕಾಶಕಿ ಪ್ರೇಮ ಶಿವಕುಮಾರ ಜೊತೆಗೂಡಿ ಇಬ್ಬರೂ ಪ್ರೇಮ ಪುಸ್ತಕವೊಂದನ್ನು ಬಿಡುಗಡೆ ಮಾಡುವ ಮೂಲಕ ತಮ್ಮ ವ್ಯಾಂಲಂಟೈನ್ ದಿನಗಳ ನೆನಪು ಮಾಡಿಕೊಂಡಿದ್ದಾರೆ. ಪ್ರೇಮಪತ್ರದ ಆಫೀಸು ಎಂಬ ಶೀರ್ಷಿಕೆಯೇ ಆಸಕ್ತಿ ಹುಟ್ಟಿಸುವಂತಿದೆ, ನಾವೂ ಪ್ರೇಮಪತ್ರಗಳನ್ನ ಬರೆದುಕೊಳ್ತಿದ್ವಿ ಎಂದು ನೆನಪು ಮಾಡಿಕೊಂಡು, ಪುಸ್ತಕದಲ್ಲಿದ್ದ ಎರಡು ಪತ್ರಗಳ ಸಾಲುಗಳನ್ನು ಪರಸ್ಪರರು ಪತ್ರದ ರೀತಿಯಲ್ಲಿ ಓದಿಕೊಂಡರು.

ಹರಿಪ್ರಿಯ, “ಸಾವಿರ ಜನರ ಮಧ್ಯೆ ಇದ್ದರೂ ನಾನು ಏಕಾಂಗಿಯೇ, ನಿನ್ನ ನೆನಪಿನ ಭಾವವಿರದಿದ್ದರೆ” ಎಂದು ಹೇಳಿದರೆ, ವಸಿಷ್ಠ ಸಿಂಹ , ” ತನಗಾಗಿ ಏನನ್ನೂ ಮಾಡಿಕೊಳ್ಳದ ನೀರಿನಂತೆ ನಾನು ನಿನ್ನನ್ನು ಪ್ರೀತಿಸುತ್ತೇನೆ ” ಎಂದು ಹರಿಪ್ರಿಯಾರ ಮುಖದಲ್ಲಿ ನಗು ಮೂಡಿಸಿದರು. ಮಾವಲಿ ಪಬ್ಲಿಕೇಶನ್ ಇಂದ ಪ್ರಕಟವಾಗುತ್ತಿರುವ ಈ ಕಥಾ ಸಂಕಲನವನ್ನು ಹೆಚ್ಚು ಜನ ಓದಲಿ ಮತ್ತು ಇಂಥ ಅನೇಕ ಪುಸ್ತಕಗಳು ಅವರಿಂದ ಮೂಡಿ ಬರಲಿ ಎಂದು ಆಶಿಸಿದರು.

‘ಇಷ್ಟು ವರ್ಷಗಳಿಗಿಂತ ಈ ಬಾರಿ ನಮ್ಮ ವ್ಯಾಲಂಟೈನ್ ಡೇ ವಿಶೇಷವಾಗಿ ಆಯಿತು, ಪ್ರೇಮಪುಸ್ತಕವೊಂದು ನಮ್ಮಿಂದ ಬಿಡುಗಡೆ ಆಗುವಂತಾಯಿತು’ ಎಂದು ಹರಿಪ್ರಿಯ ಸಂತಸ ವ್ಯಕ್ತಪಡಿಸಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಗ್​ಬಾಸ್​ ಖ್ಯಾತೀಯ ಪ್ರಶಾಂತ್​ ಸಂಬರಗಿ ಸುದ್ದಿಯಲ್ಲಿದ್ದಾರೆ.

Thu Feb 16 , 2023
ಬಿಗ್​ಬಾಸ್​ ಖ್ಯಾತೀಯ ಪ್ರಶಾಂತ್​ ಸಂಬರಗಿ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಸಿನಿಮಾ ವಿಚಾರಕ್ಕೆ ಸುದ್ದಿ ಅಗಿರೋದು ಖಂಡಿತಾ ಅಲ್ಲ. ಫೇಸ್​ಬುಕ್​ನಲ್ಲಿ ಹಂಚಿಕೊಂಡಿರುವ ಪೋಸ್ಟ್​ನಿಂದ ವೈರಲ್​ ಆಗಿದ್ದಾರೆ. ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿಯವರ ಬಗ್ಗೆ ಹಂಚಿಕೊಂಡಿರುವ ಫೋಟೊದಿಂದ ಈಗ ಕಾಂಗ್ರೆಸಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇವರ ಪೋಸ್ಟ್​ ನೋಡಿ ಅನೇಕರು ಕಾಮೆಂಟ್​ ಬರೆದಿದ್ದಾರೆ. ಇನ್ನು ಕೆಲವರು ಬೈಗುಳದ ಸುರಿಮಳೆಯನ್ನೇ ಸುರಿಸಿದ್ದಾರೆ. ಅಂದಹಾಗೆಯೇ ಸಂಬರಗಿ ಹಂಚಿಕೊಂಡಿರುವ ಪೋಸ್ಟ್​ನಲ್ಲೇನಿದೆ? ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರಗಿ ಸಾಮಾಜಿಕ […]

Advertisement

Wordpress Social Share Plugin powered by Ultimatelysocial