ಇಂದು ಸಂಜೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ : ಐವರು ಸಚಿವರಿಗೆ ಟಿಕೆಟ್ ಮಿಸ್?

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ದೆಹಲಿಯಲ್ಲಿ ಕಳೆದ ಎರಡು ದಿನಗಳಿಂದ ಸಭೆ ನಡೆಯುತ್ತಿದ್ದು, ಇಂದು ಸಂಜೆ ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಈ ನಡುವೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಐವರು ಹಾಲಿ ಸಚಿವರಿಗೆ ಟಿಕೆಟ್ ಮಿಸ್ ಆಗುವ ಸಾಧ್ಯತೆ ಇದೆ. ಸರ್ವೆ ವರದಿ ಹಾಗೂ ವಯಸ್ಸಿನ ಆಧಾರದಲ್ಲಿ ಐವರು ಸಚಿವರಿಗೆ ಬಿಜೆಪಿ ಟಿಕೆಟ್ ಸಿಗಲ್ಲ ಎನ್ನಲಾಗಿದ್ದು, ಉಳಿದ 22 ಸಚಿವರಿಗೆ ಟಿಕೆಟ್ ಫಿಕ್ಸ್ ಆಗಿದೆ ಎಂದು ಹೇಳಲಾಗುತ್ತಿದೆ.

ಪ್ರವಾಸದಲ್ಲಿರುವ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ದೆಹಲಿಗೆ ವಾಪಸಾದ ಬಳಿಕ ಅವರ ನೇತೃತ್ವದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಆ ಸಭೆಯಲ್ಲಿ ಎಲ್ಲವೂ ಸುಸೂತ್ರವಾಗಿ ನಡೆದು ಒಮ್ಮತಾಭಿಪ್ರಾಯ ಮೂಡಿದಲ್ಲಿ ರಾತ್ರಿಯೇ ಪಟ್ಟಿ ಬಿಡುಗಡೆ ಮಾಡಬಹುದು. ಇಲ್ಲದಿದ್ದರೆ ಬುಧವಾರಕ್ಕೆ ಮುಂದೂಡಿಕೆಯಾಗಲಿದೆ ಎಂದು ತಿಳಿದುಬಂದಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶಕ್ಕೆ ಕೇಂದ್ರ ನಾಯಕರ ಜೊತೆ ಚರ್ಚಿಸುವೆ ಶೋಭಾ ಕರಂದ್ಲಾಜೆ..!

Tue Apr 11 , 2023
ಬೆಂಗಳೂರು : ಸಿಆರ್ ಪಿಎಫ್ ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವ ಕೇಂದ್ರ ನಾಯಕರ ಜೊತೆ ಚರ್ಚೆ ಮಾಡುತ್ತೇನೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಆರ್ ಪಿಎಫ್ ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವ ಕೇಂದ್ರ ನಾಯಕರ ಜೊತೆ ಚರ್ಚೆ ಮಾಡುತ್ತೇನೆ. ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಮನವಿ ಮಾಡುತ್ತೇನೆ ಎಂದು ಬೆಂಗಳೂರಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ […]

Advertisement

Wordpress Social Share Plugin powered by Ultimatelysocial