ಕೊರಟಗೆರೆ:- ಪಟ್ಟಣದ ಕೋಟೆ ಬೀದಿಯ ವೆಂಕಟರಮಣ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿರುವ ಬೆಟ್ಟದಲ್ಲಿ ಮೇಯುತ್ತಿದ್ದ ಮೇಕೆಗಳ ಮೇಲೆ ಮೂರು ಚಿರತೆಗಳಿಂದ ದಾಳಿ ಚಿರತೆಗಳ ದಾಳಿಗೆ ಒಂದು ಮೇಕೆ ಬಲಿ..ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಮೇಕೆ ಕಳೆದುಕೊಂಡ ರೈತನಿಗೆ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ..ಹಲವು ತಿಂಗಳುಗಳಿಂದ ಒಂದೊಂದಾಗಿ ಮೇಕೆ ಹಾಗೂ ನಾಯಿಗಳು ಕಾಣೆಯಾಗುತ್ತಿದ್ದು ಚಿರತೆಗೆ ಆಹಾರವಾಗುತ್ತಿದೆ ಎಂದು ಗ್ರಾಮಸ್ಥರು ದೂರು…ಬೆಟ್ಟದ ತಪ್ಪಲಿನಲ್ಲಿ ಕುಡಿಯುವ ನೀರಿನ ಬಾವಿ ಇದ್ದು ಸಾರ್ವಜನಿಕರ ಪ್ರತಿನಿತ್ಯ ಅಲ್ಲಿಗೆ ಬರಬೇಕು ರಾತ್ರಿ ಸಮಯದಲ್ಲಿ ವಿದ್ಯುತ್ ಕಂಬಗಳಲ್ಲಿ ಬೆಳಕು ಇಲ್ಲ ಇಂತಹ ಸಂದರ್ಭದಲ್ಲಿ ಸಾರ್ವಜನಿಕರ ಮೇಲೆ ಚಿರತೆಗಳು ದಾಳಿ ಮಾಡಿದರೆ ಏನು ಮಾಡಬೇಕು ಆದ್ದರಿಂದ ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗಳು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಮನವಿ ಮಾಡಿದರು…ದೇವರಾಜು ಮೇಕೆಗಳ ಮಾಲೀಕ..
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada