ಗುರುವಾರ ಬೆಳಗ್ಗೆ 8 ಗಂಟೆಯ ಹೊತ್ತಿಗೆ ದೇಶದಲ್ಲಿ 67,084 ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗಿದ್ದು!

ನವದೆಹಲಿ:ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕಿನ ಅಬ್ಬರ ಮತ್ತಷ್ಟು ಕಡಿಮೆಯಾಗುತ್ತಿದೆ. ಗುರುವಾರ ಬೆಳಗ್ಗೆ 8 ಗಂಟೆಯ ಹೊತ್ತಿಗೆ ದೇಶದಲ್ಲಿ 67,084 ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ 1,241 ಸಾವು ಸಂಭವಿಸಿದೆ.ಈ ಮೂಲಕ ದೇಶದಲ್ಲಿ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 5,06,520 ಆಗಿದೆ.ದೇಶದಲ್ಲಿ 67,084 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,24,10,976ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 5,06,520ಕ್ಕೆ ತಲುಪಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 7,90,789 ಕ್ಕೆ ತಲುಪಿದೆ.ದಿನಂಪ್ರತಿಯ ಪಾಸಿಟಿವ್ ದರ ಶೇಕಡಾ 4.44ರಷ್ಟಿದೆ.ಈ ಮಧ್ಯೆ, ಕಳೆದ 24 ಗಂಟೆಗಳಲ್ಲಿ 1,67,882 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೆ ದೇಶದಲ್ಲಿ ಕೋವಿಡ್ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 4,11,80,751ಕ್ಕೆ ಏರಿಕೆಯಾಗಿದೆ.ಇನ್ನು ಭಾರತದಲ್ಲಿ ಒಂದೇ 13,46,534ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 74,29,08,121 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,71,28,19,947 ಡೋಸ್ ಲಸಿಕೆ ವಿತರಿಸಲಾಗಿದೆ .

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಆರ್‌.ಟಿ.ಓ. ಕಚೇರಿ ಬಳಿಯೂ ಸಹಾಯಕ ಸಬ್‌-ಇನ್ಸ್‌ಪೆಕ್ಟರ್‌ ಹುದ್ದೆಯ ಅಧಿಕಾರಿಗಳನ್ನು ನಿಯೋಜಿಸಿರುವ ಬೆಂಗಳೂರು!

Thu Feb 10 , 2022
ಬೆಂಗಳೂರು ಸಂಚಾರಿ ಪೊಲೀಸ್‌ನ ಪೂರ್ವ ವಿಭಾಗವು ಕೇವಲ ಎರಡೇ ದಿನಗಳ ಒಳಗೆ ನಾಲ್ಕು ಆರ್‌.ಟಿ.ಓ. ಕಚೇರಿಗಳ ಬಳಿ ಹೊಸದಾಗಿ ನೋಂದಾಯಿಸಿದ 60 ಪ್ರಕರಣಗಳಿಂದ ದಂಡದ ರೂಪದಲ್ಲಿ 24,000 ರೂ.ಗಳನ್ನು ಸಂಗ್ರಹಿಸಿದೆ.ಪ್ರತಿ ಆರ್‌.ಟಿ.ಓ. ಕಚೇರಿ ಬಳಿಯೂ ಸಹಾಯಕ ಸಬ್‌-ಇನ್ಸ್‌ಪೆಕ್ಟರ್‌ ಹುದ್ದೆಯ ಅಧಿಕಾರಿಗಳನ್ನು ನಿಯೋಜಿಸಿರುವ ಬೆಂಗಳೂರು ಸಂಚಾರಿ ಪೊಲೀಸ್, ದಂಡ ತಪ್ಪಿಸಿಕೊಂಡ ಸವಾರರಿಂದ ದಂಡ ಪೀಕಿಸುತ್ತಿದೆ.ಭಟ್ಟರಹಳ್ಳಿ  , ಕಸ್ತೂರಿ ನಗರ  , ಎಲೆಕ್ಟ್ರಾನಿಕ್ಸ್ ಸಿಟಿ   ಮತ್ತು ಎಚ್‌ಎಸ್‌ಆರ್‌ ಲೇಔಟ್‌  ಆರ್‌ಟಿಓ ಕಚೇರಿಗಳಲ್ಲಿ ಹೀಗೆ […]

Advertisement

Wordpress Social Share Plugin powered by Ultimatelysocial