ಒಬ್ಬ ಟಿಎಂಸಿ ಕಾರ್ಯಕರ್ತ ಜನಸಾಮಾನ್ಯರಿಗೆ ಹೊಡೆದ ಎಂದರೆ ಕಣ್ಣೀರು ಹಾಕಬೇಡಿ.

ಕೋಲ್ಕತಾ: ಒಬ್ಬ ಟಿಎಂಸಿ ಕಾರ್ಯಕರ್ತ ನಿಮಗೆ (ಜನಸಾಮಾನ್ಯರಿಗೆ) ಹೊಡೆದ ಎಂದರೆ ಕಣ್ಣೀರು ಹಾಕಬೇಡಿ. ಆತನನ್ನು ಕಂಬಕ್ಕೆ ಕಟ್ಟಿ4-5 ಸಲ ಕಪಾಳಕ್ಕೆ ಹೊಡೆಯಿರಿ ಎಂದು ಬಿಜೆಪಿ ಸಂಸದೆ ಲಾಕೆಟ್‌ ಚಟರ್ಜಿ ಕರೆ ನೀಡಿದ್ದಾರೆ. ಇದು ಬಂಗಾಳ ರಾಜಕೀಯದಲ್ಲಿ ಭಾರಿ ವಿವಾದ ಸೃಷ್ಟಿಸಿದೆ.

ಇತ್ತೀಚೆಗೆ ಬಿಜೆಪಿ ಕಾರ್ಯಕರ್ತ ಸಾಗರ್‌ ಬಿಸ್ವಾಸ್‌ ಎಂಬಾತ ‘ದೀದಿ ಸುರಕ್ಷಾ ಕವಚ’ ಎಂಬ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ರಸ್ತೆ ಸಮಸ್ಯೆ ಬಗ್ಗೆ ಕೇಳಿದಾಗ, ಆತನಿಗೆ ಟಿಎಂಸಿ ಕಾರ್ಯಕರ್ತನೊಬ್ಬ ಕಪಾಳಕ್ಕೆ ಹೊಡೆದಿದ್ದ. ಈ ಹಿನ್ನೆಲೆಯಲ್ಲಿ ಹೂಗ್ಲಿ ಸಂಸದೆ ಲಾಕೆಟ್‌, ಇಂಥ ಕೃತ್ಯಗಳಿಗೆ ಕಪಾಳಮೋಕ್ಷದ ಮೂಲಕವೇ ಪ್ರತೀಕಾರ ಕೈಗೊಳ್ಳಿ ಎಂದು ಕರೆ ನೀಡಿದ್ದಾರೆ. ಈ ಹೇಳಿಕೆಗೆ ಟಿಎಂಸಿ ಆಕ್ಷೇಪ ವ್ಯಕ್ತಪಡಿಸಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಮರ್ಪಕ ವಿದ್ಯುತ್ ಗೆ ಆಗ್ರಹಿಸಿ ರೈತ ಸಂಘ ದಿಂದ ಪ್ರತಿಭಟನೆ.

Wed Jan 18 , 2023
ಚಾಮರಾಜನಗರ ತಾಲ್ಲೂಕಿನ ಸಂತೇಮರಹಳ್ಳಿಸುತ್ತಲಿನ ಗ್ರಾಮಗಳಿಗೆ ಸಮರ್ಪಕವಾಗಿ ವಿದ್ಯುತ್  ಪೂರೈಸಬೇಕೆಂದು ಆಗ್ರಹಿಸಿ ರೈತ ಸಂಘದ ಮುಖಂಡರುಸಂತೇಮರಹಳ್ಳಿ ಸೆಸ್ಕ್ ಕಚೇರಿ ಎದುರು ಧರಣಿ ನಡೆಸಿದರುಸಂತೇಮರಹಳ್ಳಿಯ ಪ್ರವಾಸಿಮಂದಿರದಿಂದ ರೈತ ಮುಖಂಡರು ಅಧಿಕಾರಿಗಳ ವಿರುದ್ಧಘೋಷಣೆಗಳನ್ನು ಕೂಗಿದರು.ಮೆರವಣಿಗೆಯಲ್ಲಿ ಸೆಸ್ಟ್ ಕಚೇರಿಗೆ ತೆರಳಿದರುನಂತರ ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ರವರು ಮಾತನಾಡಿ ಸೆಸ್ಕ್ ನವರು ಇತ್ತೀಚೆಗೆ ಬೆಳಗಿನ ಸಮಯ 4 ಗಂಟೆತ್ರಿಪಿಜ್ ವಿದ್ಯುತ್ ನೀಡಿದರೂ ಪದೇ ಪದೇ ಸ್ಥಗಿತ ಮಾಡುತ್ತಿದ್ದಾರೆ.ರಾತ್ರಿ ವೇಳೆ 3 ಗಂಟೆ ತ್ರಿಫೇಸ್ನೀಡುತ್ತಿದ್ದು ಯಾವಾಗ […]

Advertisement

Wordpress Social Share Plugin powered by Ultimatelysocial