ದುನಿಯಾ ವಿಜಯ್ ಟಾಲಿವುಡ್‌ನಲ್ಲಿ ಮಿಂಚೋಕೆ ಶುರು ಮಾಡಿದ್ದಾರೆ.

ದುನಿಯಾ ವಿಜಯ್ ಟಾಲಿವುಡ್‌ನಲ್ಲಿ ಮಿಂಚೋಕೆ ಶುರು ಮಾಡಿದ್ದಾರೆ. ಬಾಲಕೃಷ್ಣ ಅಭಿನಯದ ‘ವೀರ ಸಿಂಹ ರೆಡ್ಡಿ’ ಮೂಲಕ ಖಳನಾಯಕನಾಗಿ ಎಂಟ್ರಿ ಕೊಟ್ಟಿದ್ದಾರೆ. ಈಗ ಈ ಸಿನಿಮಾ ರಿಲೀಸ್ ಆಗಿದ್ದು, ಬ್ಲ್ಯಾಕ್ ಕೋಬ್ರಾ ನೋಡಿ ಭೇಷ್ ಅನ್ನುತ್ತಿದ್ದಾರೆ. ದುನಿಯಾ ವಿಜಯ್ ಸ್ಯಾಂಡಲ್‌ವುಡ್‌ನಲ್ಲಿ ನಟನೆ ಜೊತೆ ನಿರ್ದೇಶಕರಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ‘ಸಲಗ’ ಹಿಟ್ ಲಿಸ್ಟ್ ಸೇರಿದೆ. ಒಂದ್ಕಡೆ ತೆಲುಗು ಅವಕಾಶವನ್ನೂ ಬಿಡದೆ, ಇನ್ನೊಂದು ಕಡೆ ‘ಸಲಗ’ ಸಕ್ಸಸ್ ಅನ್ನೂ ಬಿಡದೆ ಎರಡೂ ಸಂಭಾಳಿಸಿಕೊಂಡು ಬಂದಿದ್ದಾರೆ. “ನನ್ನ ತಾಯಿ ಏನು ಬೇಡಿಕೊಂಡಿದ್ಲೋ ಗೊತ್ತಿಲ್ಲ.. ಬಾಲಯ್ಯ ಜೊತೆ ನಟಿಸೋ ಅವಕಾಶ ಸಿಕ್ತು” ದುನಿಯಾ ವಿಜಯ್! ದುನಿಯಾ ವಿಜಯ್ ಮನಸ್ಸು ಮಾಡಿದ್ದರೆ ‘ವೀರ ಸಿಂಹ ರೆಡ್ಡಿ’ ಎರಡನೆ ಸಿನಿಮಾನೋ, ಮೂರನೆಯದ್ದೋ ಆಗಬೇಕಿತ್ತು. ಟಾಲಿವುಡ್‌ ಯಂಗ್ ಟೈಗರ್ ಜೂ.ಎನ್‌ಟಿಆರ್ ಸಿನಿಮಾದಲ್ಲಿ ನಟಿಸೋಕೆ ಅವಕಾಶ ಸಿಕ್ಕಿತ್ತು. ಆದರೆ, ಆ ಚಾನ್ಸ್ ಅನ್ನು ದುನಿಯಾ ವಿಜಯ್ ಕೈ ಬಿಟ್ಟಿದ್ದರು. ಅದಕ್ಕೆ ಕಾರಣವೇನು? ಅನ್ನೋದನ್ನು ‘ವೀರ ಸಿಂಹ ರೆಡ್ಡಿ’ ಸಿನಿಮಾದ ಸಂದರ್ಶನದ ವೇಳೆ ರಿವೀಲ್ ಮಾಡಿದ್ದಾರೆ.

Jr. Ntr ಸಿನಿಮಾಗೆ ಮೊದಲ ಆಫರ್ಜೂ.ಎನ್‌ಟಿಆರ್ ಸಿನಿಮಾ ‘ಜನತಾ ಗ್ಯಾರೇಜ್’ ಬ್ಲಾಕ್‌ ಬಸ್ಟರ್ ಹಿಟ್ ಆಗಿತ್ತು. ಇದರ ಹಿಂದೆನೇ 2016ರಲ್ಲಿ ‘ಜೈ ಲವ ಕುಶ’ ಸಿನಿಮಾ ಸೆಟ್ಟೇರಿತ್ತು. ಈ ಸಿನಿಮಾಗೆ ದುನಿಯಾ ವಿಜಯ್‌ಗೆ ಆಫರ್ ನೀಡಲಾಗಿತ್ತು. ಆದರೆ, ದುನಿಯಾ ವಿಜಯ್ ಕನ್ನಡದಲ್ಲಿ ಯೋಗರಾಜ್‌ ಭಟ್ ನಿರ್ದೇಶನದ ‘ದನಕಾಯೋನು’ ಸಿನಿಮಾದಲ್ಲಿ ನಟಿಸುತ್ತಿದ್ದರು. ಹಾಗೇ ‘ಮಾಸ್ತಿಗುಡಿ’ ಸಿನಿಮಾ ಸೆಟ್ಟೇರುವುದರಲ್ಲಿತ್ತು. ಹೀಗಾಗಿ ಜೂ.ಎನ್‌ಟಿಆರ್ ಸಿನಿಮಾವನ್ನು ಕೈ ಬಿಟ್ಟಿದ್ದರು. ಈ ಬಗ್ಗೆ ತೆಲುಗು ಮಾದ್ಯಮಗಳಲ್ಲಿ ವಿಜಯ್ ಹೇಳಿಕೊಂಡಿದ್ದಾರೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ

Thu Jan 12 , 2023
ಪ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ ಝೈದಾ(22) ಮೃತ ಗೃಹಿಣಿ ಪತಿಯಿಂದಲೇ ಪತ್ನಿ ಕೊಲೆ ಆರೋಪ ದೀಪಾಂಜಲಿನಗರದ ಮನೆಯಲ್ಲಿ ನಡೆದಿರುವ ಘಟನೆ ಪತಿ ಸೈಫ್ ಅಲಿ ಪತ್ನಿ ಮೇಲೆ ಹಲ್ಲೆ ನಡೆಸಿ, ಕೈ ಕುಯ್ದು, ನೇಣು ಬಿಗಿದ ಆರೋಪ ಕಳೆದ ಮೂರು ವರ್ಷಗಳ ಹಿಂದೆ ಸೈಫ್ ಅಲಿಯೊಂದಿಗೆ ವಿವಾಹ ಮಾಡಿದ್ದ ಪೋಷಕರು ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪತಿ ವಿರುದ್ದ ಕೇಸ್ ದಾಖಲು.   ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ […]

Advertisement

Wordpress Social Share Plugin powered by Ultimatelysocial