ಕಲಬುರಗಿ : ಮಸೀದಿಗಳಲ್ಲಿ ಧ್ವನಿವರ್ಧಕ ತೆರವಿಗೆ ನೀಡಿದ್ದ ಗಡುವು ನಾಳೆಗೆ ಅಂತ್ಯವಾಗಿದ್ದು, ನಾಳೆಯಿಂದ ಮಸೀದಿಗಳ ಸಮೀಪದ ದೇಗುಲಗಳಲ್ಲಿ ಹನುಮಾನ್ ಚಾಲೀಸ್ ಮತ್ತು ಭಜನೆಗಳನ್ನು ಲೌಡ್ ಸ್ಪೀಕರ್ ಗಳಲ್ಲಿ ಮೊಳಗಿಸುವುದಾಗಿ ಶ್ರೀರಾಮಸೇನೆ ಹೇಳಿದೆ.
ಈ ಕುರಿತು ಮಾಹಿತಿ ನೀಡಿರುವ ಶ್ರೀರಾಮಸೇನೆ ರಾಜ್ಯ ಘಟಕದ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ, ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಆಟೊ ನಿಲ್ದಾಣದ ಬಳಿಯ ದೇವಸ್ಥಾನದಲ್ಲಿ ಹನುಮಾನ್ ಚಾಲೀಸಾ ಹಾಕಲಾಗುವುದು. ಮಧ್ಯಾಹ್ನ 12 ರಿಂದ 2 ಗಂಟೆಯವರೆಗೆ ಭಜನೆ, ಹನುಮಾನ ಚಾಲಿಸಾ ಪಠಿಸಲಾಗುವುದು ಎಂದು ಹೇಳಿದ್ದಾರೆ.
ನಾಳೆಯಿಂದ ರಾಜ್ಯದ ಬಹುತೇಕ ದೇವಸ್ಥಾನಗಳಲ್ಲಿ ಹನುಮಾನ್ ಚಾಲೀಸದ ಜೊತೆಗೆ ವೇದಮಂತ್ರಗಳನ್ನು ಮೊಳಗಿಸಲು ಶ್ರೀರಾಮಸೇನೆ ಮತ್ತು ಇತರ ಹಿಂದುತ್ವಪರ ಸಂಘಟನೆಗಳು ಮುಂದಾಗಿವೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada