ಲೂಧಿಯಾನ: ಪಂಜಾಬ್ನ ಲುಧಿಯಾನದ ಗಿಯಾಸ್ಪುರ ಪ್ರದೇಶದಲ್ಲಿನ ಕಾರ್ಖಾನೆಯೊಂದರಲ್ಲಿ ಅನಿಲ ಸೋರಿಕೆಯಿಂದ ಪ್ರಜ್ಞೆ ತಪ್ಪಿ ಒಟ್ಟು 11 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ನಾಲ್ವರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ರಕ್ಷಣಾ ತಂಡ ಧಾವಿಸಿದ್ದು, ವೈದ್ಯರು, ಆಂಬುಲೆನ್ಸ್ ಮತ್ತು ಅಗ್ನಿಶಾಮಕ ದಳದ ತಂಡ ಕೂಡ ಸ್ಥಳದಲ್ಲಿ ಬೀಡುಬಿಟ್ಟಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್ಡಿಆರ್ಎಫ್) 50 ಸದಸ್ಯರ ತಂಡ ಕೂಡ ಸ್ಥಳಕ್ಕೆ ತಲುಪಿದೆ. ಪೀಡಿತ ಪ್ರದೇಶವನ್ನು ಸುತ್ತುವರಿಯಲಾಗಿದೆ.
ಗಾಯಗೊಂಡವರಲ್ಲಿ ಐವರು ಮಹಿಳೆಯರು ಮತ್ತು ಆರು ಪುರುಷರು ಸೇರಿದ್ದಾರೆ. ಘಟನೆಯಲ್ಲಿ ಮೃತಪಟ್ಟ 11 ಮಂದಿಯಲ್ಲಿ 10 ಮತ್ತು 13 ವರ್ಷದ ಇಬ್ಬರು ಬಾಲಕರು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
https://play.google.com/store/apps/details?id=com.speed.newskannada