ಆಕಸ್ಮಿಕ ಬೆಂಕಿಯಿಂದ ಎರಡು ಟ್ರ್ಯಾಕ್ಟರ್ ಹಾಗೂ ರಾಗಿ ಹುಲ್ಲು ಬೆಂಕಿಗೆ ಆಹುತಿಯಾದ ಘಟನೆ ಗುಬ್ಬಿ ತಾಲೂಕಿನ ಕಿಟ್ಟ ಕುಪ್ಪೆ ಗ್ರಾಮದಲ್ಲಿ ನಡೆದಿದೆ. ಮೈಜಿನ್ ಸಬ್ ಎನ್ನುವವರಿಗೆ ಸೇರಿದ ರಾಗಿ ಹುಲ್ಲು ಇಂದು ಮಧ್ಯಾಹ್ನ ಆಕಸ್ಮಿಕ ಬೆಂಕಿಯಿಂದ 60 ಸಾವಿರಕ್ಕಿಂತ ಹೆಚ್ಚು ಬೆಲೆಬಾಳುವ ಹುಲ್ಲು ಸಂಪೂರ್ಣ ಸುಟ್ಟುಕರಕಲಾಗಿದೆ. ಸ್ಥಳಕ್ಕೆ ಅಗ್ನಶಾಮಕದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕೆಲಸ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ. ರಾಗಿ ಹುಲ್ಲು ಹೊಗೆಯಿಂದ ಕೂಡಿದ್ದು ಬಳಕೆಗೆ ಬರದಂತ ಸ್ಥಿತಿಗೆ ಬಂದಿದೆ.
ಇದನ್ನೂ ಓದಿ:ಕೇರಳ ಮೂಲದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ