ಸಿಧಿ (ಮಧ್ಯಪ್ರದೇಶ) : ಮಧ್ಯಪ್ರದೇಶದ ಸಿಧಿಯಲ್ಲಿ ಶುಕ್ರವಾರ ತಡರಾತ್ರಿ ಟ್ರಕ್ವೊಂದು ಎರಡು ಬಸ್ಗಳಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿದ್ದು, 50 ಮಂದಿ ಗಾಯಗೊಂಡಿದ್ದಾರೆ.ಮೊಹಾನಿಯಾ ಸುರಂಗದ ಸಮೀಪ ಬರ್ಖಾಡ ಗ್ರಾಮದ ಬಳಿ ಈ ಘಟನೆ ನಡೆದಿದೆ.ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರ್ಯಾಲಿಯಿಂದ ಹಿಂದಿರುಗುತ್ತಿದ್ದ ಜನರನ್ನು ಈ ಬಸ್ಸುಗಳು ಸಾಗಿಸುತ್ತಿದ್ದವು.ಅಧಿಕಾರಿಗಳ ಪ್ರಕಾರ, ಟ್ರಕ್ನಲ್ಲಿ ಟೈರ್ ಸ್ಫೋಟಗೊಂಡಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ.ಮುಕೇಶ್ ಶ್ರೀವಾಸ್ತವ, ಎಸ್ಪಿ, ರೇವಾ ಹೇಳಿದರು, ‘ಎರಡು ಬಸ್ಸುಗಳು ನಿಂತಿದ್ದವು, ಹಿಂದಿನಿಂದ ಟ್ರಕ್ ಬಂದು ಅದರ ಟೈರ್ ಒಡೆದ ನಂತರ ನಿಯಂತ್ರಣ ತಪ್ಪಿ ಡಿಕ್ಕಿ ಸಂಭವಿಸಿದೆ ಜನರು ಗಾಯಗೊಂಡಿದ್ದಾರೆ, ಅದರಲ್ಲಿ 15-20 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಬಗ್ಗೆ ಪೊಲೀಸರ ತನಿಖೆ ನಡೆಯುತ್ತಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಾಣ ಹಾನಿಗೆ ಸಂತಾಪ ಸೂಚಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada