ಛತ್ರ ಬುಕ್​​ ಮಾಡಿ ಬರುತ್ತಿದ್ದಾಗಲೇ ಟ್ರಾನ್ಸ್​ಫಾರ್ಮರ್​ ಸ್ಫೋಟ: ಚಿಕಿತ್ಸೆ ಫಲಿಸದೇ ಅಪ್ಪ, ಮಗಳು ಸಾವು

 

ಬೆಂಗಳೂರಿನ ಮಂಗನಹಳ್ಳಿಯಲ್ಲಿ ನಡೆದ ವಿದ್ಯುತ್ ಪರಿವರ್ತಕ ಸ್ಫೋಟದಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರೂ ಕೂಡ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಬೆಂಗಳೂರು: ಮಂಗನಹಳ್ಳಿಯಲ್ಲಿ ನಡೆದ ವಿದ್ಯುತ್ ಪರಿವರ್ತಕ ಸ್ಫೋಟದಲ್ಲಿ ಗಂಭೀರ ಗಾಯಗೊಂಡಿದ್ದ ಅಪ್ಪ, ಮಗಳು ಮೃತಪಟ್ಟಿದ್ದಾರೆ.

ಕೆಲವೇ ದಿನಗಳಲ್ಲಿ ನಡೆಯಬೇಕಿದ್ದ ಮದುವೆಗಾಗಿ ಕಲ್ಯಾಣ ಮಂಟಪ ಬುಕ್​ ಮಾಡಿಕೊಂಡು ಸ್ಕೂಟಿಯಲ್ಲಿ ವಾಪಸ್​ ಮನೆಗೆ ಬರುತ್ತಿದ್ದಾಗ, ರಸ್ತೆ ಪಕ್ಕದಲ್ಲಿದ್ದ ವಿದ್ಯುತ್​ ಪರಿವರ್ತಕ ಸ್ಫೋಟಗೊಂಡು ಯುವತಿ ಚೈತನ್ಯ(25), ಅವರ ತಂದೆ ಶಿವರಾಜ್(55) ಗಂಭೀರವಾಗಿ ಗಾಯಗೊಂಡಿದ್ದರು.

ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗನಹಳ್ಳಿ ಬಳಿ ಬುಧವಾರ ಘಟನೆ ನಡೆದಿತ್ತು‌. ಟ್ರಾನ್ಸ್​ಫಾರ್ಮರ್ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡು ಸುಟ್ಟ ಗಾಯಗಳಾಗಿದ್ದ ಶಿವರಾಜ್ ಹಾಗೂ ಚೈತನ್ಯ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿತ್ತು. ಆದರೆ ಇಬ್ಬರೂ ಕೂಡ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮುಂದಿನ ವಾರ ಚೈತನ್ಯಳ ನಿಶ್ಚಿತಾರ್ಥ ನಿಗದಿಯಾಗಿತ್ತಲ್ಲದೆ, ಕೆಲ ದಿನಗಳಲ್ಲೇ ಮದುವೆ ಸಮಾರಂಭ ನಡೆಯಬೇಕಿತ್ತು.

ಛತ್ರ ಬುಕ್​​ ಮಾಡಿ ಬರುತ್ತಿದ್ದಾಗಲೇ ಟ್ರಾನ್ಸ್​ಫಾರ್ಮರ್​ ಸ್ಫೋಟಮದುವೆಗೆ ಕಲ್ಯಾಣ ಮಂಟಪವೊಂದನ್ನು ಬುಕ್​ ಮಾಡಿಕೊಂಡು ಸ್ಕೂಟಿಯಲ್ಲಿ ನೈಸ್‌ರಸ್ತೆಯ ಮಂಗನಹಳ್ಳಿ ಬಳಿ ಬರುತ್ತಿದ್ದಾಗ, ವಿದ್ಯುತ್​ ಪರಿವರ್ತಕ ಇದ್ದಕ್ಕಿದ್ದಂತೆ ಸ್ಫೋಟಗೊಂಡಿತ್ತು. ಸ್ಥಳೀಯರು ಕೂಡಲೇ ಇಬ್ಬರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಅವಘಡದಿಂದ ಇಬ್ಬರನ್ನೂ ಕಳೆದುಕೊಂಡು ಮದುವೆಯ ಸಂಭ್ರಮದಲ್ಲಿರಬೇಕಾದ ಮನೆಯಲ್ಲಿ ಸಶ್ಮಾನ ಮೌನ ಆವರಿಸಿದೆ. ನಿನ್ನೆ ನಡೆದ ದುರಂತದ ವಿಡಿಯೋವನ್ನು ಸ್ಥಳೀಯರು ಸೆರೆಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ಲೋಡ್ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇತ್ತೀಚೆಗಿನ ಕೋರ್ಟ್ ಸಮನ್ಸ್ ನಂತರ ಸಲ್ಮಾನ್ ಖಾನ್ ಅವರನ್ನು ಬೆಂಬಲಿಸಿದ್ದ,ರಾಖಿ ಸಾವಂತ್!

Thu Mar 24 , 2022
ಬಾಲಿವುಡ್‌ನಲ್ಲಿ ಗೆಳೆತನಗಳು ಏರ್ಪಟ್ಟಾಗ, ಸ್ನೇಹಿತರು ಪರಸ್ಪರ ಗಟ್ಟಿಯಾಗಿ ನಿಂತು ಯೋಚಿಸುವ ಬಲವಾದವು. ಇದೇ ವರ್ಗಕ್ಕೆ ಸೇರಿದವರು ನಟ ಸಲ್ಮಾನ್ ಖಾನ್ ಮತ್ತು ಟಿವಿ ರಿಯಾಲಿಟಿ ತಾರೆ ರಾಖಿ ಸಾವಂತ್. ಇತ್ತೀಚೆಗೆ ಕೋರ್ಟ್ ಸಮನ್ಸ್ ಸ್ವೀಕರಿಸಿದ ಬಗ್ಗೆ ಕೇಳಿದಾಗ ವಿವಾದದ ರಾಣಿ ಮತ್ತೊಮ್ಮೆ ಸೂಪರ್‌ಸ್ಟಾರ್‌ಗೆ ನಿಷ್ಠೆಯನ್ನು ತೋರಿಸಿದ್ದಾರೆ. ಗೊತ್ತಿಲ್ಲದವರಿಗೆ, ಮಂಗಳವಾರ, ಅಂಧೇರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಖಾನ್ ಮತ್ತು ಅವರ ಅಂಗರಕ್ಷಕನ ವಿರುದ್ಧ ದೂರದರ್ಶನ ಪತ್ರಕರ್ತ ಅಶೋಕ್ ಪಾಂಡೆಗೆ ಬೆದರಿಕೆ ಮತ್ತು […]

Advertisement

Wordpress Social Share Plugin powered by Ultimatelysocial