‘ತ್ರಿವಿಕ್ರಮ’ ಸಿನಿಮಾ ಪ್ರದರ್ಶನದ ಕುರಿತು ವಿಕ್ರಮ್ ರವಿಚಂದ್ರನ್ ಮಾತು

ರವಿಚಂದ್ರನ್ ಪುತ್ರ ವಿಕ್ರಮ್ ನಟನೆಯ ಚೊಚ್ಚಲ ಚಿತ್ರ ತ್ರಿವಿಕ್ರಮ ಚಿತ್ರಕ್ಕೆ ಪ್ರೇಕ್ಷಕರು ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಸಹನಮೂರ್ತಿ ನಿರ್ದೇಶನದ ರೊಮ್ಯಾಂಟಿಕ್ ಸಿನಿಮಾ ಜೂನ್ 10 ರಂದು ಬಿಡುಗಡೆಯಾಗಿತ್ತು.

ಕರ್ನಾಟಕದ ಕೆಲವು ಭಾಗಗಳಲ್ಲಿ ಪಾಸಿಟಿವ್ ರೆಸ್ಪಾನ್ಸ್ ಬರುತ್ತಿರುವ ಹಿನ್ನೆಲೆಯಲ್ಲಿ ಸ್ಕ್ರೀನ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ.

ಯಾವುದೇ ಹೊಸಬರಿಗೆ ಇದೊಂದು ಉತ್ತಮ ಆರಂಭ ಎಂದು ಸಂತಸ ವ್ಯಕ್ತಪಡಿಸಿರುವ ವಿಕ್ರಂ, ಕುಟುಂಬ ಪ್ರೇಕ್ಷಕರು ಚಿತ್ರಮಂದಿರಗಳಿಗೆ ಬರುವುದನ್ನು ನೋಡುವುದು ಅಪಾರ ಖುಷಿ ತಂದಿದೆ ಎಂದಿದ್ದಾರೆ. ನಾನು ವಿವಿಧ ಥಿಯೇಟರ್‌ಗಳಿಗೆ ಭೇಟಿ ನೀಡುತ್ತಿದ್ದೇನೆ ಮೊದಲ ದಿನವೇ ‘ಹೌಸ್‌ಫುಲ್’ ಬೋರ್ಡ್‌ಗಳನ್ನು ನೋಡುತ್ತಿರುವುದಕ್ಕೆ ಹಾಗೂ ಶೇ. 60 ಆಕ್ಯುಪೆನ್ಸಿ ಇರುವುದಕ್ಕೆ ವಿಕ್ರಮ್ ಸಂತಸ ವ್ಯಕ್ತ ಪಡಿಸಿದ್ದಾರೆ.

ಗೌರಿ ಎಂಟರ್‌ಟೈನರ್ಸ್ ಅಡಿಯಲ್ಲಿ ಸೋಮಣ್ಣ ನಿರ್ಮಿಸಿದ ತ್ರಿವಿಕ್ರಮ ಚಿತ್ರದ ಮೂಲಕ ರವಿಚಂದ್ರನ್ ಪುತ್ರ ವಿಕ್ರಮ್ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದರು. ಚಿತ್ರದ ನಾಯಕಿ ಆಕಾಂಕ್ಷಾ ಶರ್ಮಾ ಗೆ ಇದು ಕನ್ನಡದಲ್ಲಿ ಮೊದಲ ಚಿತ್ರವಾಗಿದೆ. ತ್ರಿವಿಕ್ರಮ್ ಬಿಡುಗಡೆಗಾಗಿ ಕಾಯುತ್ತಿದ್ದ ವಿಕ್ರಮ್ ತಮ್ಮ ಮುಂದಿನ ಸಿನಿಮಾ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಬುಧಾಬಿ: ಮೋದಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ಯುಎಇ ಅಧ್ಯಕ್ಷ

Wed Jun 29 , 2022
  ಅಬುಧಾಬಿ ಜೂನ್ 29: ಜಿ-7 ಶೃಂಗಸಭೆಯ ಬಳಿಕ ಮಂಗಳವಾರ ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಬುಧಾಬಿಯಲ್ಲಿ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಆತ್ಮೀಯ ಸ್ವಾಗತ ಕೋರಿದರು. ಮಾಹಿತಿಯ ಪ್ರಕಾರ, ಪಿಎಂ ಮೋದಿ ಮತ್ತು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅವರೊಂದಿಗೆ ಅಬುಧಾಬಿಯಲ್ಲಿ ಸಭೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ, ಗಲ್ಫ್ ರಾಷ್ಟ್ರದ ಮಾಜಿ ಅಧ್ಯಕ್ಷ ಶೇಖ್ […]

Advertisement

Wordpress Social Share Plugin powered by Ultimatelysocial