ತುಳು ಚಿತ್ರರಂಗ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ.!

ತುಳು ಚಿತ್ರರಂಗ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ಇದೇ ಮೊದಲ‌ ಬಾರಿಗೆ ಪ್ರಪಂಚದ 11 ರಾಷ್ಟ್ರದಲ್ಲಿ ತುಳು ಚಿತ್ರ ಬಿಡುಗಡೆಯಾಗುತ್ತಿದೆ. ತುಳು‌ಚಿತ್ರರಂಗದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ತುಳು ಸಿನಿಮಾ ವಿಶ್ವದ ಹನ್ನೊಂದು ರಾಷ್ಟ್ರದಲ್ಲಿ ಪ್ರೀಮಿಯರ್ ಷೋ ನಡೆಯಲಿದೆ.

ವೈಭವ್ ಪ್ಲಿಕ್ಸ್ ನ ಮ್ಯಾಂಗೋ ಪಿಕಲ್ ಬ್ಯಾನರ್ ಅಡಿಯಲ್ಲಿ ತಯಾರಾದ ರಾಜ್ ಸೌಂಡ್ಸ್ ಆಂಡ್ ಲೈಟ್ಸ್ ತುಳು ಸಿನಿಮಾ ಮೇ 13,14,15 ರಂದು ಹಲವು ದೇಶಗಳಲ್ಲಿ ಪ್ರೀಮಿಯರ್ ಪ್ರದರ್ಶನ ಕಾಣಲಿದೆ.

ಈ ಪ್ರೀಮಿಯರ್ ಶೋನ ಅಧೀಕೃತ ಉದ್ಘಾಟನೆ ಎಪ್ರಿಲ್ 24 ರಂದು ದುಬೈನಲ್ಲಿರುವ ಮಾರ್ಕೋ ಪೋಲೊ ಹೊಟೇಲ್ ನಲ್ಲಿ ನಡೆಯಲಿದೆ. ವಿದೇಶದಲ್ಲಿರುವ ತುಳುವರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಈ ಪ್ರೀಮಿಯರ್ ಶೋ ನಡೆಯಲಿದೆ.

‘ರಾಜ್ ಸೌಂಡ್ಸ್ & ಲೈಟ್ಸ್’ ತುಳು ಚಲನಚಿತ್ರ ಯುಎಸ್ ಎ, ಲಂಡನ್, ಬಹ್ರೇನ್, ಕುವೈತ್, ನೈಜೀರಿಯಾ, ಜಾಂಬಿಯಾ, ಸೌದಿ ಅರೇಬಿಯಾ, ಇಸ್ರೇಲ್, ಕತಾರ್, ಯುಎಇ ಮತ್ತು ಒಮಾನ್ ರಾಷ್ಟ್ರಗಳಲ್ಲಿ ಪ್ರೀಮಿಯರ್ ಶೋ ಪ್ರದರ್ಶನಗೊಳ್ಳಲಿದೆ.

ಅಲ್ಲದೇ ದೇಶದ ಆರು ಮಹಾನಗರದಲ್ಲೂ ಚಿತ್ರ ತೆರೆಕಾಣಲಿದೆ. ಮಂಗಳೂರು, ಬೆಂಗಳೂರು, ಮೈಸೂರು, ಬರೋಡಾ, ಪುಣೆ ಮತ್ತು ಮುಂಬೈ ನಗರದಲ್ಲಿ ಚಿತ್ರ ಪ್ರದರ್ಶನ ಆಗಲಿದೆ. ಈ ಚಿತ್ರ ತುಳು ಚಿತ್ರರಂಗದ ಅತೀ ದೊಡ್ಡ ಚಿತ್ರವಾಗಿದ್ದು ಸುಮಾರು ಒಂದೂವರೆ ಕೋಟಿ ರೂಪಾಯಿ ಬಜೆಟ್ ಹಾಕಿ ಸಿನಿಮಾವನ್ನು ನಿರ್ಮಾಣ ಮಾಡಲಾಗಿದೆ.

‘ರಾಜ್ ಸೌಂಡ್ಸ್ & ಲೈಟ್ಸ್’ ಚಿತ್ರ ಮೇ 20ರಂದು ತೆರೆ ಕಾಣಲಿದೆ. ‘ಒಂದು ಮೊಟ್ಟೆಯ ಕಥೆ’ ಚಿತ್ರ ತಂಡದ ಸದಸ್ಯರ ನೇತೃತ್ವದಲ್ಲಿ ವೈಭವ್ ಪ್ರಿಕ್ಸ್ ಅಡಿಯಲ್ಲಿ, ಮ್ಯಾಂಗೋ ಪಿಕಲ್ ಬ್ಯಾನರ್ ಸಹಭಾಗಿತ್ವದಲ್ಲಿ ‘ರಾಜ್ ಸೌಂಡ್ಸ್ ಆಂಡ್ ಲೈಟ್ಸ್’ ಚಿತ್ರ ನಿರ್ಮಾಣ ಗೊಂಡಿದೆ. ಈ ಚಿತ್ರ ಸಂಪೂರ್ಣ ಫ್ಯಾಮಿಲಿ ಎಂಟರ್ಟೈನ್ಮೆಂಟ್ ಚಿತ್ರವಾಗಿದ್ದು ಮೇ 20 ರಂದು ಕರಾವಳಿ ಜಿಲ್ಲೆಯಾದ್ಯಂತ ಪ್ರದರ್ಶನ ಕಾಣಲಿದೆ.

ಈ ಚಿತ್ರವನ್ನು ಯುವನಟ ರಾಹುಲ್ ಅಮೀನ್ ನಿರ್ದೇಶನ ಮಾಡಿದ್ದು,ಆನಂದ್ ಎನ್ ಕುಂಪಲ ನಿರ್ಮಾಪಕ ರಾಗಿದ್ದಾರೆ..ಸಿನಿಮಾ ದ ನಾಯಕ ನಟ ವಿನೀತ್ ಕುಮಾರ್ ಆಗಿದ್ದು,ಅವರೇ ಸಿನಿಮಾ ಕಥೆಯನ್ನು ಮಾಡಿದ್ದಾರೆ.ಚಿತ್ರ ಸಂಭಾಷಣೆ ಯನ್ನು ಪ್ರಸನ್ನ ಶೆಟ್ಟಿ ಬೈಲೂರು,ಛಾಯಾಗ್ರಹಣ ವನ್ನು ವಿಷ್ಣುಪ್ರಸಾದ್ ಮಾಡಿದ್ದಾರೆ.. ಸಂಗೀತ ನಿರ್ದೇಶನವನ್ನು ಸೃಜನ್ ಕುಮಾರ್ ತೋನ್ಸೆ,ನೃತ್ಯ ಸಂಯೋಜನೆಯನ್ನು ನವೀನ್ ಶೆಟ್ಟಿ ಮಾಡಿದ್ದಾರೆ..ಚಿತ್ರ ಕಥೆಯನ್ನು ವಿನೀತ್ ಕುಮಾರ್ ಮತ್ತು ರಾಹುಲ್ ಅಮೀನ್ ಬರೆದಿದ್ದಾರೆ..

ನಾಯಕರಾಗಿ ವಿನೀತ್ ಕುಮಾರ್, ನಾಯಕಿಯಾಗಿ ಯಶ ಶಿವಕುಮಾರ್‌ ಹಾಗೂ ನಾಯಕಿ ಕರಿಷ್ಮಾbಅಮೀನ್ ಅಭಿನಯಿಸಿದ್ದಾರೆ. ತಾರಾಗಣದಲ್ಲಿ ಹಾಸ್ಯ ದಿಗ್ಗಜರಾದ ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್,ಭೋಜರಾಜ್ ವಾಮಂಜೂರು ಹಾಗೂ ಸತೀಶ್ ಬಂದಲೆ, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ, ಮರ್ವಿನ್, ಉಮೇಶ್ ಮಿಜಾರ್, ರವಿ ರಾಮಕುಂಜ, ಚೈತ್ರ ಶೆಟ್ಟಿ (ಚಿಂಪು) ಹಾಗೂ ಇನ್ನಿತರ ಕಲಾವಿದರು ಮುಖ್ಯ ಭೂಮಿಕೆ ಯಲ್ಲಿ ಕಾಣಿಸಿಕೊಂಡಿದ್ದಾರೆ. ಬಿ ಅಶೋಕ್ ಕುಮಾರ್, ಸುಹಾನ್ ಪ್ರಸಾದ್, ಪವನ್ ಕುಮಾರ್, ನಿತಿನ್ ರಾಜ್ ಶೆಟ್ಟಿ, ಅರ್ಪಿತ್ ಅಡ್ಯಾರ್, ಅಜಯ್ ಬಾಳಿಗ, ಸೀತಾರಾಮ ಶೆಟ್ಟಿ ಇವರು ಸಹ ನಿರ್ಮಾಪಕರಾಗಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ಜೇಮ್ಸ್' ಈಗ ಮತ್ತೆ ಬಿಡುಗಡೆ ಆಗುತ್ತಿದೆ.

Tue Apr 19 , 2022
ಪುನೀತ್ ರಾಜ್‌ಕುಮಾರ್ ಪೂರ್ಣ ಪ್ರಮಾಣದ ನಾಯಕ ನಟನಾಗಿ ಅಭಿನಯಿಸಿದ ಕೊನೆಯ ಸಿನಿಮಾ ‘ಜೇಮ್ಸ್’ ಈಗ ಮತ್ತೆ ಬಿಡುಗಡೆ ಆಗುತ್ತಿದೆ. ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬವಾದ ಮಾರ್ಚ್ 17 ರಂದು ಬಿಡುಗಡೆ ಆಗಿದ್ದ ಸಿನಿಮಾ ದಾಖಲೆಯ ಪ್ರದರ್ಶನ ಕಂಡಿತ್ತು. ಆದರೆ ಒಂದು ತಿಂಗಳ ಅವಧಿಯಲ್ಲಿ ಮತ್ತೆ ಬಿಡುಗಡೆ ಆಗುತ್ತಿದೆ. ಕಳೆದ ತಿಂಗಳು ‘ಜೇಮ್ಸ್’ ಬಿಡುಗಡೆ ಆದಾಗ ಪುನೀತ್ ರಾಜ್‌ಕುಮಾರ್ ಪಾತ್ರಕ್ಕೆ ನಟ ಶಿವರಾಜ್ ಕುಮಾರ್ ಧ್ವನಿ ನೀಡಿದ್ದರು. ಆದರೆ ಈ ಬಾರಿ ಮರು […]

Advertisement

Wordpress Social Share Plugin powered by Ultimatelysocial