13 ವರ್ಷದ ಬಾಲಕ ಸ್ಥಳದಲ್ಲೇ ಸಾವು.

ತುಮಕೂರು: ಇನೋವಾ ಕಾರೊಂದು ಪ್ಯಾಸೆಂಜರ್‌ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ೧೩ ವರ್ಷದ ಬಾಲಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಪಾವಗಡ ತಾಲೂಕಿನ ಟಿ.ಎನ್.ಪೇಟೆ ಬಳಿ ನಡೆದ ಘಟನೆಯಲ್ಲಿ ಆಟೋದಲ್ಲಿದ್ದ ವರ್ಷಿತ್ ರೆಡ್ಡಿ (೧೩) ಎಂಬ ಬಾಲಕ ಮೃತಪಟ್ಟಿದ್ದಾನೆ.

ಆಟೋದಲ್ಲಿದ್ದ ಎಂಟು ಜನರಿಗೆ ತೀವ್ರತರವಾದ ಗಾಯಗಳಾಗಿವೆ.

ರೊದ್ದಂನಿಂದ ಪಾವಗಡ ಕಡೆ ಬರುತ್ತಿದ್ದ ಪ್ಯಾಸೆಂಜರ್ ಆಟೋದಲ್ಲಿ ಸುಮಾರು ಹತ್ತು ಜನರು ಪ್ರಯಾಣಿಸುತ್ತಿದ್ದರು. ಇನೊವಾ ಕಾರು ಪೆನುಗೊಂಡದಿಂದ ಚಿತ್ರದುರ್ಗ ಕಡೆ ಹೋಗುತ್ತಿತ್ತು.

ಗಾಯಾಳುಗಳಿಗೆ ಹಿಂದೂಪುರ, ಚಳ್ಳಕೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ತೀವ್ರವಾಗಿ ಗಾಯಗೊಂಡವರು ತುಮಕೂರು, ಬೆಂಗಳೂರಿಗೆ ಶಿಪ್ಟ್ ಮಾಡಲಾಗಿದೆ. ಪಾವಗಡ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇಡೀ ಬೆಂಗಳೂರಿಗೆ ತಲೆನೋವಾಗಿದ್ದ ನಟೋರಿಯಸ್ ಸುಲುಗೆಕೋರರು ಅರೆಸ್ಟ್‌.

Mon Jan 16 , 2023
ಇಡೀ ಬೆಂಗಳೂರಿಗೆ ತಲೆನೋವಾಗಿದ್ದ ನಟೋರಿಯಸ್ ಸುಲುಗೆಕೋರರು ಅರೆಸ್ಟ್‌ 77 ಪ್ರಕರಣದಲ್ಲಿ ಬೇಕಾಗಿದ್ದ ಅಬ್ರಹಾರ್ ಹಾಗೂ ಅಫ್ತಾಬ್ ಅರೆಸ್ಟ್ ಬೆಂಗಳೂರಿನ ರಾಜಗೋಪಾಲನಗರ ಪೊಲೀಸರಿಂದ ಅಬ್ರಹಾರ್ ಟೀಂ ಅರೆಸ್ಟ್ ಹಾಡುಹಗಲೇ ಲಾಂಗ್ ಹಿಡಿದು ಸುಲಿಗೆ ಮಾಡ್ತಿದ್ದ ಅಬ್ರಹಾರ್ ಟೀಂ ಬಿಟಿಎಂ ಲೇಔಟ್ ನಲ್ಲಿ ರಸ್ತೆಯಲ್ಲೇ ಮಚ್ಚೆತ್ತಿ ಸುಲಿಗೆ ಮಾಡಿದ್ದ ಅಬ್ರಹಾರ್ ರಾಜಗೋಪಲನಗರ,ಕಾಮಾಕ್ಷಿಪಾಳ್ಯ ಭಾಗದಲ್ಲೂ ರೋಡ್ ರಾಬ್ರಿ ಮಾಡಿದ್ದ ಅಬ್ರಹಾರ್ ಶಿವಾಜಿನಗರದ ಉದ್ಯಮಿಯೊಬ್ಬರನ್ನೂ ಸುಲಿಗೆ ಮಾಡಿದ್ದ ಟೀಂ ಪಲ್ಸರ್ ಬೈಕ್ ನಲ್ಲಿ ಬಂದು ಕೃತ್ಯವೆಸಗ್ತಿದ್ದ […]

Advertisement

Wordpress Social Share Plugin powered by Ultimatelysocial