ತುಮಕೂರು: ಇಂದು ಎಲ್ಲೆಡೆ ಶ್ರೀರಾಮ ನಾಮ ಸ್ಮರಣೆ ಮೊಳಗುತ್ತಿದೆ. ಹಿಂದೂಗಳು ರಾಮನಾಮ ಜಪಿಸುತ್ತಾ ಭಕ್ತಿಯ ಪರಾಕಾಷ್ಠೆ ಮೆರೆಯುತ್ತಿದ್ದಾರೆ. ಆದರೆ ತುಮಕೂರಲ್ಲಿ ಮುಸ್ಲಿಮರೂ ಕೇಸರಿ ಶಲ್ಯ ಧರಿಸಿ ಶ್ರೀರಾಮ ನವಮಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ.
ಹಿಂದೂಗಳ ಜತೆ ಅವರೂ ಪಾನಕ ಹಂಚುತ್ತಿದ್ದಾರೆ.
ತುಮಕೂರು ನಗರದ ಭದ್ರಮ್ಮ ಸರ್ಕಲ್ನಲ್ಲಿ ಯುವ ಕಾಂಗ್ರೆಸ್ನಿಂದ ರಾಮನವಮಿ ಆಚರಣೆ ಮಾಡಲಾಗುತ್ತಿದ್ದು, ‘ಶ್ರೀರಾಮ್’ ಎಂದು ಘೋಷಣೆ ಕೂಗುತ್ತಾ ಕಾರ್ಯಕರ್ತರು ಜನರಿಗೆ ಪಾನಕ ಹಂಚುತ್ತಿದ್ದಾರೆ.
ಕೇಸರಿ ಶಲ್ಯ ಧರಿಸಿರುವ ಹಿಂದೂ ಹಾಗೂ ಮುಸ್ಲಿಂ ಕಾಂಗ್ರೆಸ್ ಕಾರ್ಯಕರ್ತರು ನಾವೆಲ್ಲರೂ ಒಂದೇ ಎಂಬ ಸಂದೇಶ ಸಾರುತ್ತಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada