ಕಡಬ ತಾಲೂಕು.ಕಲ್ಲುಗುಡ್ಡೆಯಲ್ಲಿ ಚಿರತೆ ದಾಳಿ ಇಬ್ಬರಿಗೆ ಗಾಯ.

ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಹೇರ ಎಂಬಲ್ಲಿ ಇಬ್ಬರ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಇಂದು ನಸುಕಿನ ವೇಳೆ ಸಂಭವಿಸಿದೆ. ಹೇರ ನಿವಾಸಿಗಳಾದ ಚಂದ್ರ ಶೇಖರ್ ಹಾಗೂ ಸೌಮ್ಯ ಕಾಮತ್ ಅವರು ರಾತ್ರಿ ತೋಟದ ಸ್ಪಿಂಕ್ಲೇರ್ ಬದಲಾಯಿಸುವಲ್ಲಿ ನಿರತರಾಗಿರುವ ವೇಳೆ ಚಿರತೆ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ಗಾಯಗೊಂಡಿರುವ ಚಂದ್ರ ಶೇಖರ್ ಹಾಗೂ ಸೌಮ್ಯ ಕಾಮತ್ ಅವರನ್ನು ಕಡಬ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿರತೆ ಸದ್ಯ ತೋಟದೊಳಗೆ ಅವಿತಿರುವ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆಯವರು ಭೇಟಿ ನೀಡಿದ್ದು, ಚಿರತೆ ಸೆರೆ ಹಿಡಿಯುವ ಸಿದ್ಧತೆ ನಡೆಸಲು ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ:ಟಾಟಾ ಏಸಿ ಮಗುಚಿ ಬಿದ್ದು ಒಬ್ಬ ವ್ಯಕ್ತಿ ಸಾವು, 6 ಜನ ಮಹಿಳೆಯರಿಗೆ ಗಂಭೀರ ಗಾಯ

Please follow and like us:

Leave a Reply

Your email address will not be published. Required fields are marked *

Next Post

ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಿದ ಪೋಲೀಸರು

Fri Feb 12 , 2021
ರಸ್ತೆ ಸುರಕ್ಷತಾ ಸಪ್ತಾಹದ ಮೂಲಕ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹಂದನಕೆರೆ ಹೋಬಳಿ ಪಿಎಸ್ ವೈ ಶಿವಣ್ಣನವರು ಮತ್ತು ಪೊಲೀಸ್ ಸಿಬ್ಬಂದಿಗಳು ರಸ್ತೆಯಲ್ಲೇ ನಿಂತು ಜನರಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಿದ್ದಾರೆ. ಇದಲ್ಲದೆ ಜನರು ತಮ್ಮ ವಾಹನಗಳಿಗೆ ದಾಖಲೆ ಮಾಡಿಸಿಕೊಳ್ಳುವುದು ಮತ್ತು ರಸ್ತೆ ನಿಯಮಗಳನ್ನ ಪಾಲಿಸುವ ಬಗ್ಗೆ ಅರಿವು ಮೂಡಿಸಿದ್ದಾರೆ. ರಸ್ತೆಯಲ್ಲಿ ವಾಹನ ಚಾಲಕರಿಗೆ ದಂಡ ಹಾಕುವ ಪೊಲೀಸರೇ ರಸ್ತೆಯಲ್ಲಿ ನಿಂತು ಅರಿವು ಮೂಡಿಸಿರುವುದು ಮಾದರಿಯ ಕೆಲಸವಾಗಿದೆ. ಇದನ್ನೂ […]

Advertisement

Wordpress Social Share Plugin powered by Ultimatelysocial