ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಹೇರ ಎಂಬಲ್ಲಿ ಇಬ್ಬರ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಇಂದು ನಸುಕಿನ ವೇಳೆ ಸಂಭವಿಸಿದೆ. ಹೇರ ನಿವಾಸಿಗಳಾದ ಚಂದ್ರ ಶೇಖರ್ ಹಾಗೂ ಸೌಮ್ಯ ಕಾಮತ್ ಅವರು ರಾತ್ರಿ ತೋಟದ ಸ್ಪಿಂಕ್ಲೇರ್ ಬದಲಾಯಿಸುವಲ್ಲಿ ನಿರತರಾಗಿರುವ ವೇಳೆ ಚಿರತೆ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ಗಾಯಗೊಂಡಿರುವ ಚಂದ್ರ ಶೇಖರ್ ಹಾಗೂ ಸೌಮ್ಯ ಕಾಮತ್ ಅವರನ್ನು ಕಡಬ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿರತೆ ಸದ್ಯ ತೋಟದೊಳಗೆ ಅವಿತಿರುವ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆಯವರು ಭೇಟಿ ನೀಡಿದ್ದು, ಚಿರತೆ ಸೆರೆ ಹಿಡಿಯುವ ಸಿದ್ಧತೆ ನಡೆಸಲು ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ:ಟಾಟಾ ಏಸಿ ಮಗುಚಿ ಬಿದ್ದು ಒಬ್ಬ ವ್ಯಕ್ತಿ ಸಾವು, 6 ಜನ ಮಹಿಳೆಯರಿಗೆ ಗಂಭೀರ ಗಾಯ