ಘಟಪ್ರಭಾ ಅಚ್ಚುಕಟ್ಟಿಗೆ ಹಿಂಗಾರು ಹಂಗಾಮಿನಲ್ಲಿ ನೀರು : ಗೋವಿಂದ ಎಂ. ಕಾರಜೋಳ

ಘಟಪ್ರಭಾ ಅಚ್ಚುಕಟ್ಟಿಗೆ ಹಿಂಗಾರು ಹಂಗಾಮಿನಲ್ಲಿ ನೀರು- ಸಚಿವ ಗೋವಿಂದ ಎಂ. ಕಾರಜೋಳ

ಬೆಳಗಾವಿ: ಘಟಪ್ರಭಾ ಎಡದಂಡೆ ಕಾಲುವೆ ಮತ್ತು ಬಲದಂಡೆ ಕಾಲುವೆಗಳಿಗೆ 2021-22ನೇ ಸಾಲಿನ ಹಿಡಕಲ್ ಜಲಾಶಾಯದಿಂದ ಹಿಂಗಾರು ಹಂಗಾಮಿನಲ್ಲಿ ರೈತರ ಕೃಷಿ ಜಮೀನುಗಳಿಗೆ ನೀರು ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ. ಪ್ರಸ್ತುತ ಜಲಾಶಯದಲ್ಲಿ 38.85 ಟಿ.ಎಂ.ಸಿ ನೀರು ನೀರಾವರಿಗೆ ಲಭ್ಯವಿದ್ದು, ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ 18-12-2021 ರಿಂದ 07-01-2022 ರವರೆಗೆ 20 ದಿನಗಳ ಕಾಲ ನೀರು ಹರಿಸಲಾಗುವುದು. ನಂತರ 22-01-2022 ರಿಂದ 11-02-2022 ರವರೆಗೆ ಮತ್ತು 26-02-2022 ರಿಂದ 18-03-2022 ರವರೆಗೆ ಒಟ್ಟು 60 ದಿನಗಳ ಕಾಲ ನೀರು ಹರಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ತಿಳಿಸಿದರು.

ಇಂದು ಈ ಸಂಬಂಧ ನೀರಾವರಿ ಸಲಹಾ ಸಮಿತಿ (ಐ.ಸಿ.ಸಿ) ಸಭೆ ನಡೆಸಿದ ಬಳಿಕ ಸಭೆ ನಿರ್ಣಯ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿದಂತ ಅವರು, ಚಿಕ್ಕೋಡಿ ಶಾಖಾ ಕಾಲುವೆಯಿಂದ 18-12-2021 ರಿಂದ 07-01-2022 ರವರೆಗೆ 20 ದಿನಗಳ ಕಾಲ ನೀರು ಹರಿಸಲಾಗುವುದು. 27-01-2022 ರಿಂದ 16-02-2022 ರವರೆಗೆ ಮತ್ತು 08-03-2022 ರಿಂದ 28-03-2022 ರವರೆಗೆ ನೀರು ಹರಿಸಲು ನಿರ್ಣಯಿಸಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಾಳೆ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ : ಸಭಾಪತಿ ಬಸವರಾಜ ಹೊರಟ್ಟಿ

Mon Dec 20 , 2021
ಬೆಳಗಾವಿ: ನಾಳೆ ಬೆಳಗ್ಗೆ 10-30ಕ್ಕೆ ವಿಧಾನಮಂಡಲ ಅಧಿವೇಶನವನ್ನು ಆರಂಭಿಸಲಾಗುತ್ತದೆ. ಮೊದಲ ಒಂದು ಗಂಟೆ ಪ್ರಶ್ನೋತ್ತರಗಳಿಗೆ ಅವಕಾಶ ಕಲ್ಪಿಸಿ, ನಂತರ ಇಡೀ ದಿನದ ಕಲಾಪವನ್ನು ಉತ್ತರ ಕರ್ನಾಟಕ ಭಾಗದಲ್ಲಿ ಅತಿವೃಷ್ಟಿ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ನಾಶ, ಆಸ್ತಿಪಾಸ್ತಿ ನಷ್ಟ, ನೀರಾವರಿ ಯೋಜನೆಗಳು ಸೇರಿದಂತೆ ವಿವಿಧ ಸಮಸ್ಯೆಗಳನ್ನು ಚರ್ಚಿಸಲು ಮೀಸಲಿಡಲಾಗಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು. ಬೆಳಗ್ಗೆ ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಲಕ್ಷ್ಮಣ ಸವದಿ, ಶ್ರೀಕಂಠೇಗೌಡ ಮತ್ತು ಸಿ.ಎಂ. ಇಬ್ರಾಹಿಂ […]

Advertisement

Wordpress Social Share Plugin powered by Ultimatelysocial