ಭಾರೀ ಮಳೆ | ಉಡುಪಿ ಜಿಲ್ಲೆಯಲ್ಲಿ ತಗ್ಗು ಪ್ರದೇಶಗಳು ಜಲಾವೃತ, ಹಲವೆಡೆ ಕೃತಕ ನೆರೆ

ಉಡುಪಿ, ಜೂ.30: ಕಳೆದೊಂದು ದಿನದಿಂದ ನಿರಂತರವಾಗಿ ಸುರಿಯುತ್ತಿರುವ ಜಡಿಮಳೆಯಿಂದ ಜಿಲ್ಲೆಯಲ್ಲಿ ಈ ಸಲ ಮೊದಲ ಬಾರಿ ನೆರೆಯ ಭೀತಿ ತಲೆದೋರಿದೆ.

ಕಳೆದ ಸುಮಾರು 18 ಗಂಟೆಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಜಿಲ್ಲೆಯ ತಗ್ಗು ಪ್ರದೇಶಗಳೆಲ್ಲವೂ ನೀರಿನಿಂದ ಆವೃತ್ತವಾಗಿವೆ.

ನಗರ ಪ್ರದೇಶಗಳಲ್ಲಿ ಹಾಗೂ ರಾಷ್ಟ್ರೀಯ ಹೆದ್ದಾರಿ ಮತ್ತೆ ಸರ್ವಿಸ್ ರಸ್ತೆಗಳ ಮೇಲೆ ನೀರು ಹರಿಯುತ್ತಿದ್ದು, ಕೃತಕ ನೆರೆ ಕಾಣಿಸಿಕೊಂಡಿದೆ. ಇದರಿಂದಾಗಿ ಹೆಚ್ಚಿನ ಕಡೆ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಪಕ್ಕದ ದಕ್ಷಿಣ ಕನ್ನಡದಲ್ಲಿ ಕಾಲೇಜುಗಳಿಗೆ ರಜೆ ನೀಡಿದ್ದರೂ ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಡಳಿತ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿಲ್ಲ.

ಸತತ ಮಳೆಯಿಂದ ಜಿಲ್ಲೆಯ ನದಿಗಳಲ್ಲಿ ನೀರಿನ ಮಟ್ಟ ನಿಧಾನವಾಗಿ ಏರುತ್ತಿದೆ. ಮಳೆಯೊಂದಿಗೆ ಗಾಳಿ ಇಲ್ಲದ ಕಾರಣ ಸದ್ಯಕ್ಕೆ ಜಿಲ್ಲೆಯಲ್ಲಿ ನೆರೆ ಭೀತಿ ಎದುರಾಗಿಲ್ಲ. ಉಡುಪಿ ಸೇರಿದಂತೆ ಹಲವೆಡೆ ಕೃತಕ ನೆರೆಯಷ್ಟೇ ಕಾಣಿಸಿಕೊಂಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಒಬ್ಬ ಮಹಿಳೆ ಆಗಿದ್ದರೆ

Thu Jun 30 , 2022
ಲಂಡನ್, ಜೂನ್ 30: ವ್ಲಾದಿಮಿರ್ ಪುಟಿನ್ ಮತ್ತು ಉಕ್ರೇನ್ ಮೇಲೆ ರಷ್ಯಾ ಯುದ್ಧ ನಡೆಸುತ್ತಿರುವ ಬಗ್ಗೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಕುತೂಹಲಭರಿತ ಪ್ರತಿಕ್ರಿಯೆ ನೀಡಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಒಬ್ಬ ಮಹಿಳೆ ಆಗಿದ್ದರೆ ಉಕ್ರೇನ್ ಮೇಲೆ ಹುಚ್ಚುಚ್ಚಾಗಿ ಮೇಲೆರಗಿ ಯುದ್ಧ ಮಾಡುತ್ತಿರಲಿಲ್ಲ ಎಂದು ಬೋರಿಸ್ ಹೇಳಿದ್ದಾರೆ. ಜರ್ಮನಿಯ ಕ್ರುನ್ ಜಿಲ್ಲೆಯ ಶ್ಲಾಸ್ ಎಲ್ಮಾವು ಎಂಬಲ್ಲಿ ನಡೆದ G7 ಶೃಂಗಸಭೆಯ ಬಳಿಕ ಮಾಧ್ಯಮ ಸಂದರ್ಶನವೊಂದರಲ್ಲಿ ಬೋರಿಸ್ ಜಾನ್ಸನ್ ಮಾತನಾಡುತ್ತಾ […]

Advertisement

Wordpress Social Share Plugin powered by Ultimatelysocial