ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ’ವಿಶ್ವಾಸ’ಪರೀಕ್ಷೆಗೆ ಮಹೂರ್ತ ಫಿಕ್ಸ್

ಮುಂಬೈ, ಜೂನ್ 29-ಗುರುವಾರ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದ ವಿಶ್ವಾಸಮತ ಪರೀಕ್ಷೆ ನಡೆಸುವಂತೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ಶಾಸಕಾಂಗ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

ಮಂಗಳವಾರ ತಡರಾತ್ರಿ ಕೋಶ್ಯಾರಿ ಅವರು ನೀಡಿರುವ ಪತ್ರದ ಪ್ರತಿ ಮಾಧ್ಯಮಕ್ಕೂ ಸಿಕ್ಕಿದೆ, ಕಳೆದ ವಾರದಿಂದ ಶಿವಸೇನೆ ಪಕ್ಷದ ಬಹುಪಾಲು ಶಾಸಕರು ಮತ್ತು ಹಲವಾರು ಸ್ವತಂತ್ರ ಶಾಸಕರೊಂದಿಗೆ ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಹಿರಿಯ ಸಚಿವ ಏಕನಾಥ್ ಶಿಂಧೆ ಅವರು ನಾಳೆ ಮುಂಬೈಗೆ ಬರಲಿದೆ.

ಆಡಳಿತಾರೂಢ ಶಿವಸೇನೆಯಲ್ಲಿ ಬಂಡಾಯ ಉದ್ದವ್ ಠಾಕ್ರೆ ನೇತೃತ್ವದ ಮೈತ್ರಿಸರ್ಕಾರ ಈಗ ಇಕ್ಕಟ್ಟಿನಲ್ಲಿ ಸಿಲುಕಿದೆ. ಮಹಾರಾಷ್ಟ್ರ ವಿಧಾನಸಭೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಭಾಗವತ್ ಅವರಿಗೆ ಕಳುಹಿಸಿರುವ ಪತ್ರದಲ್ಲಿ ಕೋಶ್ಯಾರಿ, ಮಹಾರಾಷ್ಟ್ರ ವಿಧಾನಸಭೆಯ ವಿಶೇಷ ಅಧಿವೇಶನವನ್ನು ಜೂನ್ 30 ರಂದು (ಗುರುವಾರ) ಬೆಳಿಗ್ಗೆ 11 ಗಂಟೆಗೆ ಕರೆಯಲಾಗುವುದು, ವಿಶ್ವಾಸ ಮತದ ಏಕೈಕ ಕಾರ್ಯಸೂಚಿಯೊಂದಿಗೆ.

ಕಲಾಪ ನಡೆಯಲಿದ್ದು ಸಂಜೆ 5 ಗಂಟೆಯೊಳಗೆ ಮುಕ್ತಾಯಗೊಳ್ಳುತ್ತವೆ ಎಂದು ತಿಳಿಸಲಾಗಿದೆ, ಸದನದ ಕಲಾಪಗಳನ್ನು ನೇರ ಪ್ರಸಾರ ಮಾಡಬೇಕು ಮತ್ತು ಅದಕ್ಕೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರು ತಡರಾತ್ರಿ ರಾಜ್ಯಪಾಲರನ್ನು ಭೇಟಿಯಾಗಿ ಠಾಕ್ರೆ ನೇತೃತ್ವದ ಸರ್ಕಾರವು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಮನವಿ ಮಾಡಿದ್ದು, ಶಿವಸೇನೆ-ಎನ್‍ಸಿಪಿ-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ 39 ಶಿವಸೇನಾ ಶಾಸಕರು ಬೆಂಬಲ ಇಲ್ಲ ಎಂದು ಹೇಳಿಕೊಂಡಿದ್ದಾರೆ. ಸರ್ಕಾರ ಬಹುಮತ ಕಳೆದುಕೊಂಡಿದ್ದು ಸಿಎಂ ಸದನದಲ್ಲಿ ವಿಶ್ವಾಸಮತ ಸಾಭೀತು ಮಾಡು ಸೂಚಿಸಬೇಕೆಂದು ಮನವಿಮಾಡಿದ್ದರು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಹುಭಾಷಾ ನಟಿ ಮೀನಾ ಅವರ ಪತಿ ವಿದ್ಯಾಸಾಗರ್ ಇನ್ನಿಲ್ಲ

Wed Jun 29 , 2022
ಬೆಂಗಳೂರು, ಜೂ.29- ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಬಹುಭಾಷಾ ನಟಿ ಮೀನಾ ಅವರ ಪತಿ ವಿದ್ಯಾಸಾಗರ್ ವಿಧಿವಶರಾಗಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ವಿದ್ಯಾಸಾಗರ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕೊರೊನಾ ಸೋಂಕು ಉಲ್ಬಣಗೊಂಡ ಹಿನ್ನೆಲೆಯಲ್ಲಿ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು ಮಗಳು ಮತ್ತು ಪತ್ನಿಯನ್ನು ಅಗಲಿದ್ದಾರೆ. ಚಿತ್ರರಂಗದ ಗಣ್ಯರು ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ. ಬೆಂಗಳೂರು […]

Related posts

Advertisement

Wordpress Social Share Plugin powered by Ultimatelysocial