ಉದ್ಯಮಿ ರವಿಕಿರಣ್ ಭಟ್ ಕಿಡ್ನ್ಯಾಪ್ ಪ್ರಕರಣ; ಮೂವರು ಆರೋಪಿಗಳು ಅರೆಸ್ಟ್

ಬೆಳಗಾವಿ: ಉದ್ಯಮಿ ರವಿಕಿರಣ್ ಭಟ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಇನ್ನೋರ್ವನಿಗಾಗಿ ಶೋಧ ಮುಂದುವರೆಸಿದ್ದಾರೆ.ಬೆಳಗಾವಿಯಲ್ಲಿ ಕ್ರಿಪ್ಟೋ ಕರೆನ್ಸಿ ವ್ಯವಹಾರ ನಡೆಸುತ್ತಿದ್ದ ಉದ್ಯಮಿ ರವಿಕಿರಣ್ ಭಟ್ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 8 ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ಇದೀಗ ಮಹಾರಾಷ್ಟ್ರದಲ್ಲಿ ತಲೆ ಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತರನ್ನು ಸಾಂಗ್ಲಿಯ ಶಹನವಾಜ್ ಚಮನಶೇಖ್, ಅಜ್ಜು ಚಮನಶೇಖ್, ಅಭಿಷೇಕ್ ಶೆಟ್ಟಿ ಎಂದು ಗುರುತಿಸಲಾಗಿದೆ. ಇನ್ನೋರ್ವ ಆರೋಪಿ ಯೂನೂಸ್ ಖಾಜಿಗಾಗಿ ಶೋಧಕಾರ್ಯ ಮುಂದುವರೆದಿದೆ.ಉದ್ಯಮಿ ರವಿಕಿರಣ್ ಭಟ್ ಮಹಾರಾಷ್ಟ್ರ ಖಾಸಗಿ ಬ್ಯಾಂಕ್ ಮಾಜಿ ಉದ್ಯೋಗಿಯೊಬ್ಬರಿಗೆ 2 ಕೋಟಿ ಹಣ ಪಡೆದು ವಂಚನೆ ಎಸಗಿದ್ದಾಗಿ ಆರೋಪ ಕೇಳಿಬಂದಿತ್ತು. ಬಿಟ್ ಕಾಯಿನ್ ವ್ಯವಹಾರದಲ್ಲಿ ವಂಚನೆ ಮಾಡಿರುವ ಹಿನ್ನೆಲೆಯಲ್ಲೇ ಕಿಡ್ನಾಪ್ ಮಾಡಲಾಗಿತ್ತು ಎಂಬ ಶಂಕೆ ವ್ಯಕ್ತವಾಗಿದೆ. ಪ್ರಕರಣ ಸಂಬಂಧ ಇದೀಗ ಒಟ್ಟು 11 ಆರೋಪಿಗಳನ್ನು ಬಂಧಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಹೇಶ್ ಬಾಬು ವಿಶ್ವ ದಾಖಲೆ ನಿರ್ಮಿಸಿದ್ದಾರೆ

Sun Feb 6 , 2022
ಮೌಂಟೇನ್ ಡ್ಯೂ ಅವರ ಹೊಸ ಜಾಹೀರಾತು ಪ್ರಚಾರದ ಭಾಗವಾಗಿ ಮಹೇಶ್ ಬಾಬು ಬುರ್ಜ್ ಖಲೀಫಾದ ಮೇಲಿನಿಂದ ಸಾಹಸ ಪ್ರದರ್ಶಿಸಿದರು.ತೆಲುಗು ಸೂಪರ್‌ಸ್ಟಾರ್ ಮಹೇಶ್ ಬಾಬು ಮೌಂಟೇನ್ ಡ್ಯೂಗೆ ಹೊಸ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕಗೊಂಡಿದ್ದಾರೆ. ಮೌಂಟೇನ್ ಡ್ಯೂ ತನ್ನ ಹೊಸ “ಡರ್ ಕೆ ಆಗೇ ಜೀತ್ ಹೈ” ಅಭಿಯಾನವನ್ನು ಫೆಬ್ರವರಿ 4 ರಂದು ಮಹೇಶ್ ಬಾಬು ಒಳಗೊಂಡಿದ್ದರು. ದುಬೈನಲ್ಲಿರುವ ವಿಶ್ವದ ಅತಿ ಎತ್ತರದ ಕಟ್ಟಡ  ಬುರ್ಜ್ ಖಲೀಫಾದಲ್ಲಿ ಜಾಹೀರಾತನ್ನು ಚಿತ್ರೀಕರಿಸಲಾಗಿದೆ. ಭಯವನ್ನು […]

Advertisement

Wordpress Social Share Plugin powered by Ultimatelysocial