ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ತಾಲ್ಲೂಕು ಕಚೇರಿ ಮುಂದೆ ಇಂದು ಬೆಳಿಗ್ಗೆ ಮಲ್ಲಟ್ ಗ್ರಾಮ ಪಂಚಾಯಿತಿಯ ಕೂಲಿ ಕಾರ್ಮಿಕರು ಧರಣಿ .
ನರೇಗಾದಡಿ ಕಾರ್ಮಿಕರಿಗೆ ಕೆಲಸ
ನೀಡುವಂತೆ ಆಗ್ರಹಿಸಿ ಕೂಲಿ ಕಾರ್ಮಿಕರು ಇಂದು ಏಕಾಏಕಿಯಾಗಿ ಸಿರವಾರ ತಾಲೂಕ ಪಂಚಾಯತ್ ಗೆ ಕಾರ್ಯಾಲಯದಲ್ಲಿ ಪ್ರತಿಭಟನೆ ನಡೆಸಿದರು.
ಸಿರವಾರ ತಾಲೂಕಿನ ಮಲ್ಲಟ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಎಲ್ಲಾ ಹಳ್ಳಿಗಳ ಜನರು ಇಂದು ತಾಲೂಕು ಪಂಚಾಯತ್ ಕಾರ್ಯಾಲಯದಲ್ಲಿ ಸಲಕರಣೆಗಳೊಂದಿಗೆ ಪ್ರತಿಭಟನೆ ಮಾಡಿದರು. ಜನರಿಗೆ ನರೇಗದಾಡಿ ಉದ್ಯೋಗ ನೀಡಬೇಕು. ದುಡಿಯುವ ಕೈಗಳಿಗೆ ಕೆಲಸ ನೀಡುವಲ್ಲಿ ಮೀನಾಮೇಷ ಮಾಡುತ್ತಿರುವ ಪಿಡಿಒ ಪೃಥ್ವಿರಾಜ್ ಅವರನ್ನು ಕೂಡಲೇ ಸೇವೆಯಿಂದ ಅಮಾನತು ಮಾಡಬೇಕು ಎಂದು ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada