ಯುಗಾದಿಯಂದು ಪೋಸ್ಟರ್ ಬಿಡುಗಡೆ ಮಾಡಿ ಶುಭಕೋರಿದ ಅರ್ಜುನ್ ಗುರೂಜಿ.

ಬಹುಬೇಗ ನಮ್ಮನೆಲ್ಲಾ ಅಗಲಿದ ನಟ ಚಿರಂಜೀವಿ ಸರ್ಜಾ ಅಭಿನಯದ ” ರಾಜಮಾರ್ತಾಂಡ” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ.
ಸದ್ಯದಲ್ಲೇ ಬಿಡುಗಡೆ ದಿನಾಂಕ ಘೋಷಣೆಯಾಗಲಿದೆ.

ಯುಗಾದಿ ಹಬ್ಬದ ಶುಭದಿನದಂದು ಈ ಚಿತ್ರದ ಪೋಸ್ಟರನ್ನು ಅರ್ಜುನ್ ಗುರೂಜಿ ಮೈಸೂರಿನ ಡಿ ಆರ್ ಸಿಯಲ್ಲಿ ಬಿಡುಗಡೆ ಮಾಡಿದರು. ಡಿ.ಸಿ.ಪಿ ಪ್ರಕಾಶ್ ಗೌಡ್ರು ಹಾಗೂ ಡಿ ಆರ್ ಸಿಯ ಎಂ.ಡಿ ಶ್ಯಾಮಲ ಅವರು ಈ ಸಂದರ್ಭದಲ್ಲಿ ‌ಉಪಸ್ಥಿತರಿದ್ದರು.

ಚಿರಂಜೀವಿ ಸರ್ಜಾ ಅವರ ಸಾವಿನ ಮುಂಚೆಯೇ ಚಿತ್ರೀಕರಣ ಪೂರ್ತಿಯಾಗಿತ್ತು. ಹಾಗಾಗಿ ಅವರು ಚಿತ್ರೀಕರಣ ಮುಗಿಸಿದ್ದ ಕೊನೆಯ ಚಿತ್ರ ಅನ್ನಬಹುದು.‌ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಧ್ವನಿ ನೀಡಿರುವುದು ಸಹ ಕೇಳಬಹುದು. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಚಿರಂಜೀವಿ ಸರ್ಜಾ ಅವರ ಪಾತ್ರಕ್ಕೆ ಡಬ್ಬಿಂಗ್ ಮಾಡಲಿದ್ದಾರೆ.

ಗೀತರಚನೆಕಾರರಾಗಿ ಜನಪ್ರಿಯರಾಗಿರುವ ಕೆ.ರಾಮನಾರಾಯಣ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ಪ್ರಣವ್ ಗೌಡ.ಎನ್, ನಿವೇದಿತಾ ಹಾಗೂ ಶಿವಕುಮಾರ್ ನಿರ್ಮಿಸಿದ್ದಾರೆ.

ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಧರ್ಮವಿಶ್ ಹಿನ್ನೆಲೆ ಸಂಗೀತ, ಕೆ.ಗಣೇಶ್ ಛಾಯಾಗ್ರಹಣ, ವೆಂಕಟೇಶ್ ಯು ಡಿ ವಿ ಸಂಕಲನ, ವಿನೋದ್, ಪಳನಿರಾಜ್ ಸಾಹಸ ನಿರ್ದೇಶನ ಹಾಗೂ ಭೂಷಣ್, ಹರ್ಷ ಅವರ ನೃತ್ಯ ನಿರ್ದೇಶನ ಈ ಚತ್ರಕ್ಕಿದೆ.

ಚಿರಂಜೀವಿ ಸರ್ಜಾ ಅವರಿಗೆ ನಾಯಕಿಯರಾಗಿ ದೀಪ್ತಿ‌ ಸಾತಿ, ಮೇಘಶ್ರೀ, ತ್ರಿವೇಣಿ (ಟಗರು) ಅಭಿನಯಿದ್ದಾರೆ. ಭಜರಂಗಿ ಲೋಕಿ, ಚಿಕ್ಕಣ್ಣ, ದೇವರಾಜ್, ಸುಮಿತ್ರ, ಶಂಕರ್ ಅಶ್ವಥ್, ವಿನೀತ್ ಕುಮಾರ್ (ಬಾಂಬೆ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹಲಾಲ್‌ ದಂಗಲ್‌ ಮಧ್ಯೆ ಈಗ ಮೈಕ್‌ ಶಾಕ್‌ :

Tue Apr 5 , 2022
  ಬೆಂಗಳೂರು : ರಾಜ್ಯಾದ್ಯಂತೆ ತೀವ್ರತೆ ಪಡೆದುಕೊಂಡಿರುವ ಅಜಾನ್ ವಿವಾದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಬೇರೆ ಸಮುದಾಯದರವನ್ನು ಆಜಾನ್ ನಿಲ್ಲಿಸಿ ಎನ್ನುವ ಹಕ್ಕಿಲ್ಲ, ಹಿಂದೂ ದೇವಾಲಯಗಳಲ್ಲಿ ಭಕ್ತಿ ಗೀತೆ ಹಾಕಲಿ ಆಜಾನ್‌ ಪರ ಮಾಜಿ ಸಿಎಂ ಕುಮಾರಸ್ವಾಮಿ ಬ್ಯಾಟಿಂಗ್‌ ಮಾಡಿದ್ದಾರೆ. ಮುಸ್ಲಿಂಮರು ಹಲವು ವರ್ಷಗಳಿಂದ ಆಜಾನ್‌ ಕೂಗುತ್ತಿದ್ದಾರೆ. ಅಜಾನ್‌ ಕೂಗುವುದರಿಂದ ಶಬ್ದ ಮಾಲಿನ್ಯ ಉಂಟಾಗುವ ಹಲವು ಕಾರಣಗಳ ಬಗ್ಗೆ ಇದೀಗ ಹಿಂದೂ ಸಂಘಟನೆಗಳು ದನಿ ಎತ್ತಿವೆ ಶಬ್ಧ ಮಾಲಿನ್ಯ ಆಗುತ್ತದೆ […]

Advertisement

Wordpress Social Share Plugin powered by Ultimatelysocial