ಬೆಂಗಳೂರು: ರಾಜ್ಯದಲ್ಲಿ ಓಮಿಕ್ರಾನ್ ಆರ್ಭಟ ಹಾಗೂ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದಾಗಿ ಆರೋಗ್ಯ ಕಾರ್ಯಕರ್ತರು ಮನೆ ಮನೆ ಸರ್ವೆ ನಡೆಸಿ, ಐಎಲ್ಐ ಹಾಗೂ ಸಾರಿ ಪ್ರಕರಣಗಳ ಕುರಿತಂತೆ ಸರ್ವೆ ನಡೆಸುವಂತೆ ರಾಜ್ಯ ಆರೋಗ್ಯ ಇಲಾಖೆ ಆದೇಸಿದೆ.
ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಕೋವಿಡ್ ನಿಯಂತ್ರಣಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ ದಿನಾಂಕ 29-12-2021ರ ನಾಳೆಯಿಂದ 15-01-2022ರವರೆಗೆ ಒಂದು ಬಾರಿ ಐಎಲ್ಐ ಹಾಗೂ ಸಾರಿ ಪ್ರಕರಣಗಳ ಮನೆ ಮನೆ ಸಮೀಕ್ಷಾ ಕಾರ್ಯವನ್ನು ನಡೆಸುವಂತೆ ಆದೇಶಿಸಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: