ರಾಮಯ್ಯ ಯೂನಿವರ್ಸಿಟಿ ಆಫ್ ಅಪ್ಲೈಡ್ ಸೈನ್ಸಸ್ನ ಆರನೇ ಘಟಿಕೋತ್ಸವ ಸೋಮವಾರ ಇಲ್ಲಿ ನಡೆದಿದ್ದು, 1,647 ವಿದ್ಯಾರ್ಥಿಗಳು ಪದವಿ ಸ್ವೀಕರಿಸಿದ್ದಾರೆ.
ಏಳು ವಿದ್ಯಾರ್ಥಿಗಳಿಗೆ ಪಿಎಚ್ಡಿ, 453 ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಮತ್ತು 1,187 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. 28 ವಿದ್ಯಾರ್ಥಿಗಳು ಎಂ.ಎಸ್.ರಾಮಯ್ಯ ಚಿನ್ನದ ಪದಕ ಪಡೆದರೆ, ಅಷ್ಟೇ ಸಂಖ್ಯೆಯ ವಿದ್ಯಾರ್ಥಿಗಳು ವೆಂಕಟಮ್ಮ ರಾಮಯ್ಯ ಬೆಳ್ಳಿ ಪದಕ ಪಡೆದರು. ಎಂಟು ಸಂಶೋಧನಾ ವಿದ್ಯಾರ್ಥಿಗಳು ಅತ್ಯುತ್ತಮವಾಗಿ ಪ್ರಸ್ತುತಪಡಿಸಿದ ಸಂಶೋಧನಾ ಪ್ರಬಂಧಗಳಿಗಾಗಿ ಗೌರಮ್ಮ ರಾಮಯ್ಯ ಬೆಳ್ಳಿ ಪದಕಗಳನ್ನು ಪಡೆದರು.
ಎಐಸಿಟಿಇ ಅಧ್ಯಕ್ಷ ಅನಿಲ್ ಡಿ ಸಹಸ್ರಬುಧೆ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ‘ಶಿಕ್ಷಣದ ಮುಖ್ಯ ಗುರಿ ನೈತಿಕ ಮೌಲ್ಯಗಳನ್ನು ಹುಟ್ಟುಹಾಕುವುದು ಮತ್ತು ದೇಶದ ಕಲ್ಯಾಣಕ್ಕಾಗಿ ದುಡಿಯುವ ನಿಸ್ವಾರ್ಥ ನಾಗರಿಕರನ್ನು ಸೃಷ್ಟಿಸುವುದು. ಆತ್ಮನಿರ್ಭರ ಭಾರತವನ್ನು ರಚಿಸುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ. ಅವರು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅರ್ಥಮಾಡಿಕೊಳ್ಳಬೇಕು ಮತ್ತು ಅಭಿವೃದ್ಧಿಯ ಬದಲಾಗುತ್ತಿರುವ ಅಗತ್ಯಗಳಿಗೆ ಸ್ಪಂದಿಸಬೇಕು’ ಎಂದು ಅವರು ಹೇಳಿದರು.
ವಿಶ್ವವಿದ್ಯಾಲಯದ ಕುಲಪತಿ ಎಂ ಆರ್ ಜಯರಾಮ್, ಉಪಕುಲಪತಿ ಪ್ರೊ ಕುಲದೀಪ್ ಕುಮಾರ್ ರೈನಾ ಮತ್ತು ರಿಜಿಸ್ಟ್ರಾರ್ ಪ್ರೊ ಎಂ ಸಾಯಿಬಾಬಾ ಉಪಸ್ಥಿತರಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada