ಹಾವೇರಿ : ಉಕ್ರೇನ್ ನಲ್ಲಿ ಸಾವನ್ನಪ್ಪಿದ ರಾಣೆಬೆನ್ನೂರು ತಾಲೂಕಿನ ಚಳಗೇರಿಯ ನವೀನ್ ಮನೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದಾರೆ.ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆಯ ಹಿರೇಕೆರೂರು ಹಾಗೂ ರಾಣೇಬೆನ್ನೂರು ತಾಲೂಕಿನಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಇಂದು ಮಧ್ಯಾಹ್ನ 2-15ಕ್ಕೆ ಶಿಕಾರಿಪುರ ಹೆಲಿಪ್ಯಾಡ್ನಿಂದ ಹೊರಟು, ಮ.2-30ಕ್ಕೆ ಹಿರೇಕೆರೂರು ತಾಲೂಕು ಬಸರಿಹಳ್ಳಿ ಹೆಲಿಪ್ಯಾಡ್ಗೆ ಆಗಮಿಸುವರು. ಹಿರೇಕೆರೂರು ಪಟ್ಟಣದಲ್ಲಿ ಆಯೋಜಿಸಿರುವ ಸೂಪರ್ ಸ್ಟಾರ್ ‘ರೈತ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಭಾಗವಹಿಸುವರು.ಮಧ್ಯಾಹ್ನ 3-30ಕ್ಕೆ ಬಸರಿಹಳ್ಳಿ ಹೆಲಿಪ್ಯಾಡ್ನಿಂದ ಹೊರಟು 3-55ಕ್ಕೆ ರಾಣೇಬೆನ್ನೂರು ತಾಲೂಕು ಎಪಿಎಂಸಿ ಹೆಲಿಪ್ಯಾಡ್ಗೆ ಆಗಮಿಸುವರು. ಸಂಜೆ 4-15ಕ್ಕೆ ಚಳಗೇರಿ ಗ್ರಾಮಕ್ಕೆ ತೆರಳಿ ಇತ್ತೀಚೆಗೆ ಉಕ್ರೇನ್ನಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ಗ್ಯಾನಗೌಡರ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಲಿದ್ದಾರೆ. ಸಂಜೆ 4-55ಕ್ಕೆ ರಾಣೇಬೆನ್ನೂರು ಎಪಿಎಂಸಿ ಹೆಲಿಪ್ಯಾಡ್ನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada