ದೇರಳಕಟ್ಟೆ | ಎಸ್ಕೆಎಸ್ಸೆಸ್ಸೆಫ್ ನಿಂದ ಶಂಸುಲ್ ಉಲಮಾ ಮೌಲಿದ್ ಮಜ್ಲಿಸ್

 

ದೇರಳಕಟ್ಟೆ, ಮೇ 30: ಎಸ್ಕೆಎಸ್ಸೆಸ್ಸೆಫ್ ದೇರಳಕಟ್ಟೆ ಶಾಖೆಯ ವತಿಯಿಂದ ಮಾಸಿಕ ಶಂಸುಲ್ ಉಲಮಾ ಮೌಲಿದ್ ಮಜ್ಲಿಸ್ ಹಾಗೂ ರಮಝಾನ್ ತಿಂಗಳಲ್ಲಿ ದೇರಳಕಟ್ಟೆ ಬದ್ರಿಯಾ ಜುಮಾ ಮಸೀದಿ ವತಿಯಿಂದ ನಡೆದ ಇಫ್ತಾರ್ ಸಂಗಮದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ ಇಲ್ಲಿನ ಹಯಾತುಲ್ ಇಸ್ಲಾಂ ಮದ್ರಸ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ದೇರಳಕಟ್ಟೆಯಲ್ಲಿ ಜರುಗಿತು.

ದೇರಳಕಟ್ಟೆ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಪ್ರಧಾನ ಕಾರ್ಯದರ್ಶಿ ಅಬ್ದುರ್ರಹ್ಮಾನ್ ದಾರಿಮಿಯವರು ಶಂಸುಲ್ ಉಲಮಾ ಮೌಲಿದ್ ಗೆ ನೇತೃತ್ವ ವಹಿಸಿದ್ದರು.

ಕಿನ್ಯ ಕೇಂದ್ರ ಜುಮಾ ಮಸೀದಿಯ ಖತೀಬ್ ಎ.ಕೆ.ಅಬ್ದುಲ್ ಮಜೀದ್ ದಾರಿಮಿ ಮುಖ್ಯ ಭಾಷಣ ಮಾಡಿದರು.

ದೇರಳಕಟ್ಟೆ ಬದ್ರಿಯಾ ಜುಮಾ ಮಸೀದಿಯ ಖತೀಬ್ ಇಸ್ಹಾಕ್ ಫೈಝಿ, ಎಸ್ಕೆಎಸ್ಸೆಸ್ಸೆಫ್ ಕೇಂದ್ರ ಸಮಿತಿಯ ಸದಸ್ಯ ಅಬೂಬಕರ್ ರಿಯಾಝ್ ರಹ್ಮಾನಿ, ಎಸ್.ವೈ.ಎಸ್. ದೇರಳಕಟ್ಟೆ ವಲಯ ಪ್ರಧಾನ ಕಾರ್ಯದರ್ಶಿ ತಬೂಕ್ ಅಬ್ದುರ್ರಹ್ಮಾನ್ ದಾರಿಮಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಬೈದ್ ಮುಸ್ಲಿಯಾರ್, ದೇರಳಕಟ್ಟೆ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಕೋಶಾಧಿಕಾರಿ ಹಾಜಿ ಅಬ್ದುರ್ರಹ್ಮಾನ್ ಪನೀರ್, ದೇರಳಕಟ್ಟೆ ಬದ್ರಿಯಾ ಜುಮಾ ಮಸೀದಿಯ ಉಪಾಧ್ಯಕ್ಷ ಎಂ.ಎಚ್.ಬಾವು, ಎಸ್.ವೈ.ಎಸ್. ಮುಖಂಡರಾದ ಮುಹಮ್ಮದ್ ಪನೀರ್, ಹಾಜಿ ಮುಹಮ್ಮದ್ ಅಲಿ, ಹಾಜಿ ಮುಹಮ್ಮದ್ ಡಿ.ಎಚ್., ಬೆಳ್ಮ ಗ್ರಾಮ ಪಂಚಾಯತ್ ಸದಸ್ಯ ಇಕ್ಬಾಲ್ ಎಚ್.ಆರ್. ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾಂಗ್ರೆಸ್‌ನಿಂದ 2ನೇ ಅಭ್ಯರ್ಥಿ ಕಣಕ್ಕೆ, ರಂಗೇರಿದ ರಾಜ್ಯಸಭೆ ಚುನಾವಣೆ

Mon May 30 , 2022
ಬೆಂಗಳೂರು, ಮೇ 30- ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ನಾಲ್ಕು ಸ್ಥಾನಗಳ ಚುನಾವಣೆ ಮೂರು ಪಕ್ಷಗಳಿಗೆ ಅಗ್ನಿ ಪರೀಕ್ಷೆಯಾಗುವುದು ಖಚಿತವಾಗಿದೆ. ಏಕೆಂದರೆ ಪ್ರತಿಪಕ್ಷ ಕಾಂಗ್ರೆಸ್ ಕೊನೆ ಕ್ಷಣದಲ್ಲಿ 2ನೇ ಅಭ್ಯರ್ಥಿಯಾಗಿ ಕೇಂದ್ರದ ಮಾಜಿ ಸಚಿವ ರೆಹಮಾನ್ ಖಾನ್ ಅವರ ಪುತ್ರ ಮನ್ಸೂರ್ ಖಾನ್ ಅವರನ್ನು ಕಣಕ್ಕಿಳಿಸುವ ಮೂಲಕ ಚುನಾವಣೆ ಕಾವು ರಂಗೇರುವಂತೆ ಮಾಡಿದೆ. ಈಗಿನ ವಿಧಾನಸಭೆಯಲ್ಲಿ ಬಿಜೆಪಿ ಇಬ್ಬರು, ಕಾಂಗ್ರೆಸ್ 1 ಹಾಗೂ ಜೆಡಿಎಸ್ 2 ಪಕ್ಷಗಳ ಬೆಂಬಲ ಪಡೆದು ಓರ್ವ […]

Advertisement

Wordpress Social Share Plugin powered by Ultimatelysocial