ಬೆಂಗಳೂರಿನಲ್ಲಿ ಅಪರಿಚಿತ ವ್ಯಕ್ತಿ ಬರ್ಬರ ಹತ್ಯೆ!

ಬೆಂಗಳೂರು/ಚಾಮರಾಜನಗರ:ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ವ್ಯಕ್ತಿಯೊಬ್ಬರನ್ನು ಹತ್ಯೆಗೈದಿರುವ ಘಟನೆ ಹೊಸೂರು ರಸ್ತೆಯ ಗಾರೇಬಾವಿ ಪಾಳ್ಯದಲ್ಲಿ ಈ ಘಟನೆ ನಡೆದಿದೆ.

ಅಪರಿಚಿತ ವ್ಯಕ್ತಿಯ ಮೇಲೆ ರಾಡ್‌ನಿಂದ ಹಲ್ಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಈ ಘಟನೆ ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ನಡೆದಿದ್ದು, ಶವ ಕಂಡು ಸಾರ್ವಜನಿಕರು ನೀಡಿದ ಮಾಹಿತಿ ಆಧಾರದ ಮೇಲೆ ಸ್ಥಳಕ್ಕೆ ಬಂಡೇಪಾಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹವನ್ನು ಮರಣೋತ್ತರ‌ ಪರೀಕ್ಷೆಗೆ ರವಾನಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಬಂಡೇಪಾಳ್ಯ ಪೊಲೀಸರು, ಮೃತನ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಹಂತಕರ ಪತ್ತೆಗಾಗಿ ಗಾರೇಬಾವಿಪಾಳ್ಯ ಮುಖ್ಯರಸ್ತೆಯಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದಾರೆ.

ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ

ಚಾಮರಾಜನಗರ ಜಿಲ್ಲೆಯ ಯಳಂದೂರು ಪಟ್ಟಣದ ಹೊರವಲಯದಲ್ಲಿ ರಾಷ್ಟ್ರೀಯ ಹೆದ್ದಾರಿ 209 ಬಳಿ ಕೆಸ್ತೂರು ರಸ್ತೆಯಲ್ಲಿ ವ್ಯಕ್ತಿಯ ರಕ್ತ ಸಿಕ್ತ ಶವ ಪತ್ತೆಯಾಗಿದೆ. ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿರುವ ಶಂಕೆ ಇದ್ದು, ಮೃತ ವ್ಯಕ್ತಿ ಯಾರು ಎನ್ನುವ ಬಗ್ಗೆ ಮಾಹಿತಿ ಇಲ್ಲ. ಸ್ಥಳಕ್ಕೆ ಯಳಂದೂರು ಪಟ್ಟಣ ಪೊಲೀಸರು ಶ್ವಾನದಳದೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.‌

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭೂತಾರಾಧನೆಯ ಕಥೆಯುಳ್ಳ 'ಸತ್ಯಂ' ಸಿನಿಮಾದಲ್ಲಿ ರಂಜನಿ ರಾಘವನ್ ಫಸ್ಟ್‌ಲುಕ್ ಅನಾವರಣ.

Wed Mar 1 , 2023
  ‘ಕೆಂಪ’, ‘ಕರಿಯ 2’, ‘ಗಣಪ’ ಹೀಗೆ ಮಾಸ್ ಚಿತ್ರಗಳ ಮೂಲಕವೇ ಗುರುತಿಸಿಕೊಂಡಿದ್ದ ನಟ ಸಂತೋಷ್ ಬಾಲರಾಜ್ ಬಹಳ ದಿನಗಳ ನಂತರ ಫ್ಯಾಮಿಲಿ ಎಂಟರ್ ಟೈನರ್ ಚಿತ್ರದ ಮೂಲಕ ಮರಳಿದ್ದಾರೆ. 40 ವರ್ಷಗಳ ಹಿಂದೆ ರಾಜಮನೆತನವೊಂದರಲ್ಲಿ ನಡೆದ ಕಳಂಕದಿಂದಾಗಿ ಆ ಇಡೀ ವಂಶವೇ ಬಲಿಯಾದ ದಂತಕಥೆಯೊಂದನ್ನು ನಿರ್ದೇಶಕ ಅಶೋಕ್ ಕಡಬ ಅವರು ‘ಸತ್ಯಂ’ ಹೆಸರಿನಲ್ಲಿ ತೆರೆಮೇಲೆ ತರುತ್ತಿದ್ದಾರೆ.ಶ್ರೀಮಾತಾ ಕ್ರಿಯೇಶನ್ಸ್ ಮೂಲಕ ಮಹಂತೇಶ್ ವಿಕೆ. ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಎರಡು […]

Advertisement

Wordpress Social Share Plugin powered by Ultimatelysocial