ಉಪ್ಪಿ ಅವರು ಟೀಕಾಕಾರರಿಗೆ ತಿರುಗೇಟಿನ ರೂಪದಲ್ಲಿ ಈ ಟ್ವೀಟ್ ಮಾಡಿದ್ದಾರೆ.

 

ಬೆಂಗಳೂರು: ಪ್ರಜಕೀಯ ಮೂಲಕ ಭಿನ್ನ ರೀತಿಯ ರಾಜಕೀಯ ಮಾಡಲು ಹೊರಟಿರುವ ರಿಯಲ್ ಸ್ಟಾರ್ ಉಪೇಂದ್ರ ಅವರು ಶುಕ್ರವಾರ ಟ್ವೀಟ್ ಒಂದನ್ನು ಮಾಡಿದ್ದು,ಭಾರಿ ಚರ್ಚೆಗೊಳಗಾಗುತ್ತಿದೆ.

‘ಕೆಜಿಎಫ್ ಚಾಪ್ಟರ್ 2’ ಚಿತ್ರದ ಭಾರಿ ಯಶಸ್ಸಿನ ಬಳಿಕ ಸಿನಿಮಾಗಳಲ್ಲಿ ಸಿಗರೇಟ್ ಸೇದುವ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿರುವ ವೇಳೆಯಲ್ಲಿ ಉಪ್ಪಿ ಅವರು ಟೀಕಾಕಾರರಿಗೆ ತಿರುಗೇಟಿನ ರೂಪದಲ್ಲಿ ಈ ಟ್ವೀಟ್ ಮಾಡಿದ್ದಾರೆ.

”ಒಂದು ಸಿನಿಮಾದಲ್ಲಿ ಸಿಗರೇಟ್ ಸೇದೋದು ತಪ್ಪು ಕುಡಿಯೋದು ತಪ್ಪು, ಜೂಜಿಗೆ ಜಾಹಿರಾತು ನೀಡೋದು ತಪ್ಪು… ಆದರೆ ಇವುಗಳಿಂದ ಬರೋ ತೆರಿಗೆ ಹಣಕ್ಕಾಗಿ ಇದಕ್ಕೆಲ್ಲಾ ಅನುಮತಿ ಕೊಟ್ಟಿರೋ ಸರ್ಕಾರ ಸರಿ, ಶ್. ಯಾರೂ ಮಾತನಾಡಬಾರದು ! ನಾಯಕ ಸಂಸ್ಕ್ರತಿಯ ರಾಜಕೀಯ ಗುಂಗಿನ ಸಮಾಜದಲ್ಲಿ.. ಯಾವತ್ತೂ ಅಪ್ಪ ಸರಿ. ಮಕ್ಕಳು ತಪ್ಪು !” ಎಂದು ತಮ್ಮದೇ ವಿಭಿನ್ನ ಡೈಲಾಗ್ ಗಳ ರೂಪದಲ್ಲಿ ಉಪೇಂದ್ರ ಟ್ವೀಟ್ ಮಾಡಿದ್ದಾರೆ.

ಟ್ವೀಟ್ ಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹಲವರು ಉಪ್ಪಿ ಅವರನ್ನು ಬೆಂಬಲಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಡಿ ಕೆ ಶಿವಕುಮಾರ್ ಅವರು ಶುಕ್ರವಾರ ಕೇಸರಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Fri Apr 22 , 2022
ಬೆಂಗಳೂರು: ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದ್ದು, ಕಾಂಗ್ರೆಸ್ಸಿಗರನ್ನು ಕೋರ್ಟ್ ಗೆ ಅಲೆಸಬೇಕೆಂಬುದು ಅವರ ಉದ್ದೇಶವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ಕೇಸರಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ‘ನಾವು ದೇಶದ ರೈತರ ಪರವಾಗಿ ಹೋರಾಟ ಮಾಡಿದ ವಿಚಾರವಾಗಿ ನಮ್ಮ ಮೇಲೆ ದೂರು ದಾಖಲಾಗಿದ್ದು, ಜನ ಪ್ರತಿನಿಧಿಗಳ ನ್ಯಾಯಾಲಯದಿಂದ ವಾರೆಂಟ್ ಜಾರಿ ಆಗಿದೆ. ದಾಖಲಾದ […]

Advertisement

Wordpress Social Share Plugin powered by Ultimatelysocial