ಸ್ಯಾಂಡಲ್‌ವುಡ್‌ನಲ್ಲಿ “ಉಪ್ಪು ಹುಳಿ ಖಾರ’, “ನಾತಿಚರಾಮಿ’, “ಪಡ್ಡೆಹುಲಿ!

ಸ್ಯಾಂಡಲ್‌ವುಡ್‌ನಲ್ಲಿ “ಉಪ್ಪು ಹುಳಿ ಖಾರ’, “ನಾತಿಚರಾಮಿ’, “ಪಡ್ಡೆಹುಲಿ’, “100′, “ಗಾಳಿಪಟ-2′ ಸೇರಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿರುವ ನಿರ್ಮಾಪಕ ಎಂ. ರಮೇಶ್‌ ರೆಡ್ಡಿ, ತಮ್ಮ ಹೋಮ್‌ ಬ್ಯಾನರ್‌ ಸೂರಜ್‌ ಪೊ›ಡಕ್ಷನ್ಸ್‌ ನಡಿಯಲ್ಲಿ ಹಿಂದಿ ಸಿನಿಮಾ ನಿರ್ಮಾಣ ಮಾಡಿದ್ದು ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ.

ಅವರ ನಿರ್ಮಾಣದ “ದಿಲ್‌ ಹೈ ಗ್ರೇ’ ಚಿತ್ರ ಜುಲೈನಲ್ಲಿ ತೆರೆಗೆ ಬರಲಿದೆ.

ಶೀರ್ಷಿಕೆಯೇ ಹೇಳುವಂತೆ ಇದೊಂದು ಕ್ರೈಂ ಥ್ರಿಲ್ಲರ್‌ ಸಿನಿಮಾವಾಗಿದ್ದು, ಪ್ರಧಾನ ಮೂರು ಪಾತ್ರಗಳ ಹಿನ್ನೆಲೆಯಲ್ಲಿ ಸಿನಿಮಾ ಸಾಗಲಿದೆ. ವಿನೀತ್‌ ಪೊಲೀಸ್‌ ಇನ್ಸ್‌ಪೆಕ್ಟರ್‌ ಆಗಿ ಕಾಣಿಸಿಕೊಂಡರೆ, ಅಕ್ಷಯ್‌ ಆನ್‌ ಲೈನ್‌ನಲ್ಲಿ ಯುವತಿಯರನ್ನು ಬಲೆಗೆ ಬೀಳಿಸಿಕೊಳ್ಳುವವನಾಗಿ ಕಾಣಿಸಿಕೊಂಡಿದ್ದಾರೆ.

ಚಿತ್ರಕ್ಕೆ ನಾಯಕಿಯಾಗಿ “ಐರಾವತ’ ಖ್ಯಾತಿಯ ಊರ್ವಶಿ ರೌಟೇಲಾ ನಟಿಸಿದ್ದಾರೆ. ಸುಸಿ ಗಣೇಶನ್‌ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದು, ತಾರಿಕ್‌ ಮಹಮ್ಮದ್‌, ನವೀನ್‌ ಪ್ರಕಾಶ್‌ ಚಿತ್ರದ ಬರವಣಿಗೆಯಲ್ಲಿ ಸಾಥ್‌ ನೀಡಿದ್ದಾರೆ

ಈ ಬಗ್ಗೆ ಮಾಹಿತಿ ನೀಡುವ ನಿರ್ಮಾಪಕ ರಮೇಶ್‌ ರೆಡ್ಡಿ, ಈ ಚಿತ್ರದ ಕಥೆಯೇ ರೋಚಕವಾಗಿದೆ. ಈ ಸಿನಿಮಾದಲ್ಲಿ ಕಥೆಯೇ ಹೀರೋ. ಕ್ರೈಂ ಥ್ರಿಲ್ಲರ್‌ ಎಳೆಯಲಿ ಸಾಗುವ ಈ ಸಿನಿಮಾ ಪ್ರಸ್ತುತ ಕಾಲಘಟ್ಟ ಸೂಕ್ತವಾಗಿದೆ. ಇಂಥ ಸಿನಿಮಾ ಕಟ್ಟಿಕೊಡುವಲ್ಲಿ ನಿರ್ದೇಶಕÃ ಮತ್ತವರ ತಂಡ ಯಶಸ್ವಿಯಾಗಿದೆ. ಸದ್ಯ ಬಹುತೇಕ ಕೆಲಸಗಳು ಮುಕ್ತಾಯದ ಹಂತದಲ್ಲಿದೆ. ಜುಲೈನಲ್ಲಿ ತೆರೆಗೆ ಬರಲಿದ್ದೇವೆ ಎನ್ನುತ್ತಾರೆ.

Please follow and like us:

Leave a Reply

Your email address will not be published. Required fields are marked *

Next Post

ಬಿಎಂಟಿಸಿ ಬಸ್ಗೆ ಬೆಂಕಿ ಹೊತ್ತಿಕೊಂಡಿದ್ದರಿಂದ 40ಕ್ಕೂ ಹೆಚ್ಚು ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ!

Sun Apr 10 , 2022
ಶನಿವಾರ ಕೆಆರ್ ಸರ್ಕಲ್‌ನ ಎಸ್‌ಜೆಪಿ ಕಾಲೇಜು ಬಳಿ ಬ್ಯಾಟರಿ ಶಾರ್ಟ್ ಸರ್ಕ್ಯೂಟ್‌ನಿಂದ ಬಿಎಂಟಿಸಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, 40 ಕ್ಕೂ ಹೆಚ್ಚು ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಅಪಘಾತದಲ್ಲಿ ಬಸ್ಸಿನ ಮುಂಭಾಗದ ಭಾಗ ಸುಟ್ಟು ಕರಕಲಾಗಿದೆ. ಬಸ್ ಕೆಂಪೇಗೌಡ ಬಸ್ ನಿಲ್ದಾಣದಿಂದ ವಿದ್ಯಾನಗರಕ್ಕೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಕರ್ತವ್ಯ ಮುಗಿಸಿ ಬೈಕ್ ನಲ್ಲಿ ಮನೆಗೆ ಬರುತ್ತಿದ್ದ ಅಗ್ನಿಶಾಮಕ ಸಿಬ್ಬಂದಿ ಬೆಟ್ಟೇಗೌಡ ಹೆಚ್.ಜಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಹೈಗ್ರೌಂಡ್ಸ್ ಅಗ್ನಿಶಾಮಕ […]

Advertisement

Wordpress Social Share Plugin powered by Ultimatelysocial