ರಸ್ತೆ ಅಪಘಾತವೊಂದರಲ್ಲಿ ಕಾರು ಚಾಲಕ ಮೃತಪಟ್ಟ ಘಟನೆ ಮಂಗಳೂರು ನಗರ ಹೊರವಲಯದ ರಾ.ಹೆ.75ರ ಅಡ್ಯಾರ್ ಕಣ್ಣೂರು ಬಳಿ ನಡೆದಿದೆ!

ರಸ್ತೆ ಅಪಘಾತವೊಂದರಲ್ಲಿ ಕಾರು ಚಾಲಕ ಮೃತಪಟ್ಟ ಘಟನೆ ಮಂಗಳೂರು ನಗರ ಹೊರವಲಯದ ರಾ.ಹೆ.75ರ ಅಡ್ಯಾರ್ ಕಣ್ಣೂರು ಬಳಿ ನಡೆದಿದೆ. ಮಂಜೇಶ್ವರ ಸಮೀಪದ ಕುಂಜತ್ತೂರು ನಿವಾಸಿ ಇಬ್ರಾಹೀಂ, ಮೃತಪಟ್ಟ ಕಾರು‌ ಚಾಲಕ. ಕಾರಿನಲ್ಲಿದ್ದ ಇನ್ನಿಬ್ಬರಿಗೆ ಗಾಯಗಳಾಗಿದ್ದು, ಅವರನ್ನು‌ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮೂವರು ಕಾರಿನಲ್ಲಿ ಕುಂಜತ್ತೂರಿನಿಂದ ಬಂಟ್ವಾಳ ರಸ್ತೆಯಾಗಿ ತೆರಳುತ್ತಿದ್ದರು. ಚಾಲಕ ನಿದ್ದೆಯ ಮಂಪರಿನಲ್ಲಿದ್ದ ಕಾರಣ ಕಾರು ಡಿವೈಡರ್ ದಾಟಿ‌ದಾಗ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಂಟೈನರ್ ಢಿಕ್ಕಿ ಹೊಡೆದಿದೆ. ಇದರಿಂದ ಕಾರು ಚಲಾಯಿಸುತ್ತಿದ್ದ ಇಬ್ರಾಹೀಂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಸಂಚಾರ ದಕ್ಷಿಣ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಮೇಶ್ ಜಾರಕಿಹೊಳಿ ಶ್ರೀಮಂತ ಪಾಟೀಲ್ ಸಭೆ!

Thu May 5 , 2022
ಅಥಣಿಯಲ್ಲಿ ಸಭೆ ನಡೆಸಿದ ಉಭಯ ಶಾಸಕರು ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಕುತೂಹಲ ಮೂಡಿಸಿದ ಅಥಣಿ ಬೇಟಿ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅನುಪಸ್ಥಿತಿಯಲ್ಲಿ ಶಾಸಕ ಸಭೆ ಸಭೆ ಅಥಣಿ ಬೇಟಿ ಬಗ್ಗೆ ಇನ್ನಷ್ಟೇ ಮಾಹಿತಿ ನೀಡಬೇಕಾದ ಸಾಹುಕಾರ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial