ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದಲ್ಲಿ ಡಿಸೆಂಬರ್ 30 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ ವಂದೇ ಭಾರತ್ ಎಕ್ಸ್ಪ್ರೆಸ್(Vande Bharat Express) ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಬೆಳಕಿಗೆ ಬಂದಿದೆ.ಈ ರೈಲು ಸಂಚಾರ ಆರಂಭಿಸಿದ ಕೇವಲ ಎರಡೇ ದಿನದಲ್ಲಿ ಇದರ ಮೇಲೆ ಅಪರಿಚಿತ ದುಷ್ಕರ್ಮಿಗಳು ಕಲ್ಲು ಎಸೆದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗದಿದ್ದರೂ, ಕಲ್ಲಿನಿಂದ ಹೊಡೆದ ರಭಸಕ್ಕೆ ಕೋಚ್ ಸಂಖ್ಯೆ ಸಿ-13 ರ ಬಾಗಿಲಿನ ಗಾಜು ಒಡೆದಿದೆ. ರೈಲ್ವೆ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ರೈಲ್ವೇ ಕಾಯ್ದೆಯ ಸೆಕ್ಷನ್ 154 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಸೋಮವಾರ ಸಂಜೆ 5:50 ರ ಸುಮಾರಿಗೆ ಕುಮಾರ್ಗಂಜ್ನಲ್ಲಿ ನ್ಯೂ ಜಲ್ಪೈಗುರಿ-ಹೌರಾ ವಂದೇ ಭಾರತ್ ಎಕ್ಸ್ಪ್ರೆಸ್ ಮೇಲೆ ಕಲ್ಲು ತೂರಾಟ ನಡೆದಿತ್ತು. ಒಂದು ಮುಖ್ಯ ಬಾಗಿಲಿನ ಗಾಜು ಹೊಡೆದಿದೆ. ಯಾರಿಗೂ ಗಾಯಗಳಾಗಿಲ್ಲ. ವೇಳಾಪಟ್ಟಿಯಲ್ಲಿ ಯಾವುದೇ ವಿಳಂಬವಾಗಿಲ್ಲ’ ಎಂದು ಹಿರಿಯ ರೈಲ್ವೇ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada