Bengaluru: ಈ ವರ್ಷದ ಅಂತ್ಯದ ಸಂಭ್ರಮಾಚರಣೆಯಲ್ಲಿ ಇರುವ ಸಿಲಿಕಾನ್ ಸಿಟಿ ಮಂದಿಗೆ ಬೆಸ್ಕಾಂ ಶಾಕ್ ಕೊಟ್ಟಿದೆ. ಬೆಂಗಳೂರಿನಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿ ನಡೆಸುತ್ತಿರುವುದರಿಂದ ನಗರದ ಹಲವು ಏರಿಯಾಗಳಲ್ಲಿ ಇಂದು ಪವರ್ ಕಟ್ ಇರಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ತಿಳಿಸಿದೆ.
ನಗರದ ಬನಶಂಕರಿ, ಮತ್ತಿಕೆರೆ, ಕಮಲಾನಗರ, ಕೆಂಗೇರಿ, ಸೇರಿ ಹಲವು ಏರಿಯಾಗಳಲ್ಲಿ ಇಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5.30ರವರೆಗೆ ಕರೆಂಟ್ ಇರುವುದಿಲ್ಲ ಎಂದು ಹೇಳಲಾಗಿದ್ದು, ನಗರದ ದಕ್ಷಿಣ ವಲಯದಲ್ಲೂ ಕೂಡ ಪವರ್ ಕಟ್ ಸಮಸ್ಯೆ ಇರಲಿದೆ. ವರ್ಷಾಂತ್ಯದ ಸಂಭ್ರಮಾಚರಣೆಯಲ್ಲಿ ಇದ್ದ ಸಿಲಿಕಾನ್ ಸಿಟಿ ಮಂದಿಗೆ ಪವರ್ ಸಮಸ್ಯೆಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: