ರಾಜ್ಯದ ರಾಜಧಾನಿ ಬೆಂಗಳೂರಿನ ಟೌನ್ ಹಾಲ್ ಬಳಿ, ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ತಾರಕಕ್ಕೆ ಏರಿದ್ದು. ಪ್ರತಿಭಟನಾ ನಿರತ ವಾಟಾಳ್ ನಾಗರಾಜ್, ಸಾರಾ ಗೋವಿಂದ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ…ಬೆಂಗಳೂರಿನಲ್ಲಿ ಕರ್ನಾಟಕ ಬಂದ್ ವ್ಯಾಪಕ ಸ್ವರೂಪ ಪಡೆದಿದ್ದು. ಟೌನ್ ಹಾಲ್ ಬಳಿ ಜಮಾವಣೆಗೊಂಡಿರುವ ವಿವಿಧ ಕನ್ನಡ ಪರ ಸಂಘಟನೆಗಳು, ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ವ್ಯಾಪಕ ಪ್ರತಿಭಟನೆ ನಡೆಸುತ್ತಿವೆ. ಟೌನ್ ಹಾಲ್ ಬಳಿ ಪ್ರತಿಭಟನೆ ನಿರತರಾಗಿದ್ದಂತ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್, ಸಾರಾ ಗೋವಿಂದ್ ಸೇರಿದಂತೆ ಅನೇಕ ಕನ್ನಡಪರ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ….
ಇದನ್ನು ಓದಿ :ಗುರುಬಸವೇಶ್ವರ ಸಂಸ್ಥಾನ ಮಠಕ್ಕೆ ಈಶ್ವರ್ ಖಂಡ್ರೆ ಭೇಟಿ