ವೆಂಕಟೇಶ್ ಪ್ರಸಾದ್‌ರನ್ನು ತಿರಸ್ಕರಿಸಿದ ಬಿಸಿಸಿಐ ಮತ್ತು ಸಿಎಸಿ

 

ಯ್ಕೆದಾರರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದ, ಕನ್ನಡಿಗ ವೆಂಕಟೇಶ್‌ ಪ್ರಸಾದ್‌ರನ್ನು ಬಿಸಿಸಿಐ ಮತ್ತು ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ) ತಿರಸ್ಕರಿಸಿದೆ. ಭಾರತ ತಂಡದ ಮಾಜಿ ವೇಗಿ ದಕ್ಷಿಣ ವಲಯದಿಂದ ಅರ್ಜಿ ಸಲ್ಲಿಸಿದ್ದರು.ವೆಂಕಟೇಶ್ ಪ್ರಸಾದ್ ಆಯ್ಕೆಯಾಗುವುದು ಖಚಿತ ಎಂದು ಭಾವಿಸಲಾಗಿತ್ತು, ಆದರೆ ಅಂತಿಮ ಕ್ಷಣದಲ್ಲಿ ಈ ಅಚ್ಚರಿಯ ನಿರ್ಧಾರ ಹೊರಬಿದ್ದಿದೆ.ವಜಾಗೊಂಡಿದ್ದ ಚೇತನ್ ಶರ್ಮಾ ಮತ್ತೆ ಆಯ್ಕೆ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇನ್ನೂ ಎರಡು ವರ್ಷಗಳ ಕಾಲ ಚೇತನ್ ಶರ್ಮಾ ಅಧಿಕಾರದಲ್ಲಿ ಮುಂದುವರೆಯಲಿದ್ದಾರೆ. ಇದೇ ವಾರ ಹೊಸ ಆಯ್ಕೆಗಾರರ ಹೆಸರನ್ನು ಪ್ರಕಟಿಸಲಾಗುವುದು ಎಂದು ಬಿಸಿಸಿಐ ತಿಳಿಸಿದೆ.ಆಯ್ಕೆ ಸಮಿತಿಗಾಗಿ ಬಿಸಿಸಿಐ ಮತ್ತು ಸಿಎಸಿ ಅರ್ಜಿದಾರ ಹೆಸರನ್ನು ಶಾರ್ಟ್‌ಲಿಸ್ಟ್ ಮಾಡಿದೆ. ಚೇತನ್ ಶರ್ಮಾ, ಹರ್ವಿಂದರ್ ಸಿಂಗ್, ಅಮಯ್ ಖುರಾಸಿಯಾ, ಅಜಯ್ ರಾತ್ರಾ, ಎಸ್ ಎಸ್ ದಾಸ್, ಶ್ರೀಧರನ್ ಶರತ್, ಕಾನರ್ ವಿಲಿಯಮ್ಸ್, ಸಲೀಲ್ ಅಂಕೋಲಾ ಹೆಸರನ್ನು ಶಾರ್ಟ್‌ಲಿಸ್ಟ್ ಮಾಡಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೋವಿಡ್ ಮತ್ತೆ ಅಬ್ಬರಿಸುವ ಆತಂಕದ ಬೆನ್ನಲ್ಲೇ ಐಟಿ ಕಂಪನಿಗಳಿಂದ ಮಹತ್ವದ ತೀರ್ಮಾನ

Wed Jan 4 , 2023
ಚೀನಾ, ಅಮೆರಿಕಾ, ಜಪಾನ್, ಕೊರಿಯಾ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಕೋವಿಡ್ ಮಹಾಮಾರಿ ಮತ್ತೆ ತನ್ನ ಅಟ್ಟಹಾಸ ತೋರಿಸುತ್ತಿದ್ದು, ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗುತ್ತಿದೆ. ಭಾರತದಲ್ಲೂ ಇದು ಮುಂದಿನ ದಿನಗಳಲ್ಲಿ ಮರುಕಳಿಸಬಹುದು ಎಂಬ ಆತಂಕ ವ್ಯಕ್ತವಾಗಿದ್ದು, ಹೀಗಾಗಿ ಕೇಂದ್ರ ಸರ್ಕಾರ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ.ಚೀನಾ ಸೇರಿದಂತೆ ಕೆಲವೊಂದು ರಾಷ್ಟ್ರಗಳಿಂದ ಬರುವ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗಿದ್ದು, ಅಲ್ಲದೆ ಸಾರ್ವಜನಿಕರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸೂಕ್ತ ಎಂದು ಸಲಹೆ […]

Advertisement

Wordpress Social Share Plugin powered by Ultimatelysocial