ಆಯ್ಕೆದಾರರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದ, ಕನ್ನಡಿಗ ವೆಂಕಟೇಶ್ ಪ್ರಸಾದ್ರನ್ನು ಬಿಸಿಸಿಐ ಮತ್ತು ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ) ತಿರಸ್ಕರಿಸಿದೆ. ಭಾರತ ತಂಡದ ಮಾಜಿ ವೇಗಿ ದಕ್ಷಿಣ ವಲಯದಿಂದ ಅರ್ಜಿ ಸಲ್ಲಿಸಿದ್ದರು.ವೆಂಕಟೇಶ್ ಪ್ರಸಾದ್ ಆಯ್ಕೆಯಾಗುವುದು ಖಚಿತ ಎಂದು ಭಾವಿಸಲಾಗಿತ್ತು, ಆದರೆ ಅಂತಿಮ ಕ್ಷಣದಲ್ಲಿ ಈ ಅಚ್ಚರಿಯ ನಿರ್ಧಾರ ಹೊರಬಿದ್ದಿದೆ.ವಜಾಗೊಂಡಿದ್ದ ಚೇತನ್ ಶರ್ಮಾ ಮತ್ತೆ ಆಯ್ಕೆ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇನ್ನೂ ಎರಡು ವರ್ಷಗಳ ಕಾಲ ಚೇತನ್ ಶರ್ಮಾ ಅಧಿಕಾರದಲ್ಲಿ ಮುಂದುವರೆಯಲಿದ್ದಾರೆ. ಇದೇ ವಾರ ಹೊಸ ಆಯ್ಕೆಗಾರರ ಹೆಸರನ್ನು ಪ್ರಕಟಿಸಲಾಗುವುದು ಎಂದು ಬಿಸಿಸಿಐ ತಿಳಿಸಿದೆ.ಆಯ್ಕೆ ಸಮಿತಿಗಾಗಿ ಬಿಸಿಸಿಐ ಮತ್ತು ಸಿಎಸಿ ಅರ್ಜಿದಾರ ಹೆಸರನ್ನು ಶಾರ್ಟ್ಲಿಸ್ಟ್ ಮಾಡಿದೆ. ಚೇತನ್ ಶರ್ಮಾ, ಹರ್ವಿಂದರ್ ಸಿಂಗ್, ಅಮಯ್ ಖುರಾಸಿಯಾ, ಅಜಯ್ ರಾತ್ರಾ, ಎಸ್ ಎಸ್ ದಾಸ್, ಶ್ರೀಧರನ್ ಶರತ್, ಕಾನರ್ ವಿಲಿಯಮ್ಸ್, ಸಲೀಲ್ ಅಂಕೋಲಾ ಹೆಸರನ್ನು ಶಾರ್ಟ್ಲಿಸ್ಟ್ ಮಾಡಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada