ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಹಿರಿಯ ನಿರ್ದೇಶಕ ಭಗವಾನ್ (90) ಇನ್ನು ನೆನಪು ಮಾತ್ರ. ಅವರ ಅಗಲಿಕೆ ಸುದ್ದಿ ತಿಳಿದು ಸ್ಯಾಂಡಲ್ವುಡ್ನ ಹಿರಿಯ ನಟ ಶ್ರೀನಾಥ್ ಕಂಬನಿ ಮಿಡಿದಿದ್ದಾರೆ.
ನ್ಯೂಸ್ಫಸ್ಟ್ ಜೊತೆ ಮಾತನಾಡಿದ ಅವರು.. ಭಗವಾನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಕನ್ನಡ ಸಿನಿಮಾ ರಂಗಕ್ಕೆ ಅವರು ದೊಡ್ಡ ಕೊಡುಗೆ ನೀಡಿದ್ದಾರೆ. ಚಿತ್ರರಂಗದಲ್ಲಿ ಅವರು ಎಷ್ಟೇ ದೊಡ್ಡವರಾಗಿದ್ದರೂ ತುಂಬಾ ಸ್ನೇಹ ಜೀವಿಯಾಗಿದ್ದರು ಅಂತಾ ತಿಳಿಸಿದರು.
ಒಬ್ಬರ ಮನಸ್ಸನ್ನು ಸುಲಭವಾಗಿ ಅರ್ಥ ಮಾಡಿಕೊಳ್ಳುತ್ತಿದ್ದರು. ಎಲ್ಲಾ ವಿಚಾರಗಳನ್ನೂ ತುಂಬಾ ಓದುತ್ತಿದ್ದರು. ಅದೆಷ್ಟೋ ಕನ್ನಡ ಚಿತ್ರರಂಗದ ಕಲಾವಿದರಿಗೆ ಭಗವಾನ್ ಜೊತೆ ಕೆಲಸ ಮಾಡಲು ಆಗಿರಲಿಲ್ಲ. ಅಂತಹ ಅದೆಷ್ಟೋ ಕಲಾವಿದರು ಭಗವಾನ್ ಅವರನ್ನು ಗುರು ಎಂದು ಸ್ವೀಕರಿಸಿದ್ದರು. ಸದಾ ನಗು ಮುಖದ ವ್ಯಕ್ತಿ ಅವರದ್ದಾಗಿತ್ತು. ಇಂದು ನಮ್ಮನ್ನು ಅಗಲಿದ್ದಾರೆ. ಕನ್ನಡ ಸಿನಿಮಾ ರಂಗದ ಹಿರಿಯ ಕೊಂಡಿಯೊಂದು ಕಳಚಿದೆ. ತುಂಬಾ ನೋವಾಗಿದೆ ಎಂದು ಶ್ರೀನಾಥ್ ದುಃಖ ವ್ಯಕ್ತಪಡಿಸಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada