2023 ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಭರದ ಸಿದ್ದತೆ ನಡೆದಿದ್ದು ರಾಜ್ಯ ಕಾಂಗ್ರೆಸ್ ನಾಯಕರು ಜಂಟಿಯಾಗಿ ಬಸ್ ಸಂಚಾರ ನಡೆಸಲು ಮುಂದಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಿಎಲ್.ಪಿ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಜಂಟಿಯಾಗಿ ರಾಜ್ಯದ 28 ಲೋಕಸಭಾ ಕ್ಷೇತ್ರದಗಳಲ್ಲಿ ಬಸ್ ಸಂಚಾರ ನಡೆಸಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಇನ್ನು ರಾಜ್ಯದ ಮೊದಲ ಕಾರ್ಯಕ್ರಮವು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಆರಂಭವಾಗಲಿದ್ದು ಬರುವ 11 ಕ್ಕೆ ಚಿಕ್ಕೋಡಿಯ ಆರ್.ಡಿ ಕಾಲೇಜು ಮೈದಾನದಲ್ಲಿ ಪ್ರಜಾ ದ್ವನಿ ಸಮಾವೇಶ ನಡೆಸಿ ಬಸ್ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ರಾಜ್ಯ ಉಸ್ತುವಾರಿ ಸುರ್ಜೆವಾಲಾ ಸೇರಿಂದಂತೆ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ರಾಜ್ಯ ಕಾಂಗ್ರೆಸ್ ನಾಯಕರು ಕಾಂಗ್ರೆಸ್ ಪಕ್ಷದ ಎಲ್ಲಾ ವಿಭಾಗಗಳ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರದ ನಾಯಕರು ಕಾರ್ಯಕರ್ತರನ್ನ ಕರೆಸಿ ಬೃಹತ್ ಕಾರ್ಯಕ್ರಮ ನಡೆಸಲು ಕಾಂಗ್ರೆಸ್ ಮುಂದಾಗಿದೆ. ಈಗಾಗಲೆ ಚಿಕ್ಕೋಡಿಯ ಆರ್.ಡಿ. ಕಾಲೇಜು ಮೈದಾನದಲ್ಲಿ ಕಾರ್ಯಕ್ರಮದ ಭರದ ಸಿದ್ದತೆ ನಡೆದಿದ್ದು ಸಿದ್ದತೆಗಳನ್ನ ಕಾಂಗ್ರೆಸ್ ನಾಯಕರು ಪರಿಶಿಲಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada